ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.2022 ರಲ್ಲಿ ಈ ಯೋಜನೆ ಸಾಧ್ಯವಿಲ್ಲ ಎಂದು ಹೇಳಿದ್ದ ಸರ್ಕಾರವು ಈಗ ಮತ್ತೆ ಡಿಪಿಆರ್ ರಚಿಸಲು ಒಪ್ಪಿಗೆ ನೀಡಿದೆ.…..ಮುಂದೆ ಓದಿ….
ಶಿರಾಡಿ ಸುರಂಗ ಮಾರ್ಗಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಚರ್ಚೆ ಇದೆ. ಈ ನಡುವೆ ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಹಾಗೂ ಇಲ್ಲಿನ ಮಣ್ಣಿನ ತರಗತಿ ಹಾಗೂ ಭೂಕುಸಿದಂತಹ ಕಾರಣಗಳಿಂದ ಈ ಯೋಜನೆ ಸಾಧ್ಯವಿಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಇದೀಗ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
ಈ ಯೋಜನೆಯ ಪ್ರಕಾರ ಶಿರಾಡಿಯ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸುರಂಗ ಮಾರ್ಗದ ಸುಮಾರು 30 ಕಿಮೀ ಉದ್ದದ ಯೋಜನೆ ಇದಾಗಿದೆ. ಇದರಲ್ಲಿ ಸುಮಾರು 4 ಕಿಮೀ ಸುರಂಗ ಮಾರ್ಗವು ಒಳಗೊಳ್ಳುತ್ತದೆ. ಆದರೆ ಶಿರಾಡಿ ಘಾಟಿಯು ಅರಣ್ಯದಿಂದ ಕೂಡಿದೆ ಮತ್ತು ಭೂಕುಸಿತದಂತಹ ಕಾರಣಗಳಿಂದ ಈ ಯೋಜನೆಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಯಾಗಿತ್ತು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…