ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.2022 ರಲ್ಲಿ ಈ ಯೋಜನೆ ಸಾಧ್ಯವಿಲ್ಲ ಎಂದು ಹೇಳಿದ್ದ ಸರ್ಕಾರವು ಈಗ ಮತ್ತೆ ಡಿಪಿಆರ್ ರಚಿಸಲು ಒಪ್ಪಿಗೆ ನೀಡಿದೆ.…..ಮುಂದೆ ಓದಿ….
ಶಿರಾಡಿ ಸುರಂಗ ಮಾರ್ಗಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಚರ್ಚೆ ಇದೆ. ಈ ನಡುವೆ ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಹಾಗೂ ಇಲ್ಲಿನ ಮಣ್ಣಿನ ತರಗತಿ ಹಾಗೂ ಭೂಕುಸಿದಂತಹ ಕಾರಣಗಳಿಂದ ಈ ಯೋಜನೆ ಸಾಧ್ಯವಿಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಇದೀಗ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
ಈ ಯೋಜನೆಯ ಪ್ರಕಾರ ಶಿರಾಡಿಯ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸುರಂಗ ಮಾರ್ಗದ ಸುಮಾರು 30 ಕಿಮೀ ಉದ್ದದ ಯೋಜನೆ ಇದಾಗಿದೆ. ಇದರಲ್ಲಿ ಸುಮಾರು 4 ಕಿಮೀ ಸುರಂಗ ಮಾರ್ಗವು ಒಳಗೊಳ್ಳುತ್ತದೆ. ಆದರೆ ಶಿರಾಡಿ ಘಾಟಿಯು ಅರಣ್ಯದಿಂದ ಕೂಡಿದೆ ಮತ್ತು ಭೂಕುಸಿತದಂತಹ ಕಾರಣಗಳಿಂದ ಈ ಯೋಜನೆಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಯಾಗಿತ್ತು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…