Advertisement
MIRROR FOCUS

ಶಿರಾಡಿ ಘಾಟ್‌ ಸುರಂಗ ಮಾರ್ಗ | ಮತ್ತೆ ಸಮಗ್ರ ಯೋಜನಾ ವರದಿಗೆ ಜೀವ |

Share

ಮಂಗಳೂರು-ಬೆಂಗಳೂರು ಸಂಪರ್ಕಿಸುವ  ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.2022 ರಲ್ಲಿ ಈ ಯೋಜನೆ ಸಾಧ್ಯವಿಲ್ಲ ಎಂದು ಹೇಳಿದ್ದ ಸರ್ಕಾರವು ಈಗ ಮತ್ತೆ ಡಿಪಿಆರ್‌ ರಚಿಸಲು ಒಪ್ಪಿಗೆ ನೀಡಿದೆ.…..ಮುಂದೆ ಓದಿ….

ಶಿರಾಡಿ ಸುರಂಗ ಮಾರ್ಗಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಚರ್ಚೆ ಇದೆ. ಈ ನಡುವೆ ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಹಾಗೂ ಇಲ್ಲಿನ ಮಣ್ಣಿನ ತರಗತಿ ಹಾಗೂ ಭೂಕುಸಿದಂತಹ ಕಾರಣಗಳಿಂದ ಈ ಯೋಜನೆ ಸಾಧ್ಯವಿಲ್ಲ ಎಂದು  2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಇದೀಗ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಕರ್ನಾಟಕ ಸರ್ಕಾರ  ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

ಈ ಯೋಜನೆಯ ಪ್ರಕಾರ ಶಿರಾಡಿಯ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸುರಂಗ ಮಾರ್ಗದ ಸುಮಾರು 30 ಕಿಮೀ ಉದ್ದದ ಯೋಜನೆ ಇದಾಗಿದೆ. ಇದರಲ್ಲಿ ಸುಮಾರು 4 ಕಿಮೀ ಸುರಂಗ ಮಾರ್ಗವು ಒಳಗೊಳ್ಳುತ್ತದೆ. ಆದರೆ ಶಿರಾಡಿ ಘಾಟಿಯು ಅರಣ್ಯದಿಂದ ಕೂಡಿದೆ ಮತ್ತು ಭೂಕುಸಿತದಂತಹ ಕಾರಣಗಳಿಂದ ಈ ಯೋಜನೆಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಯಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

1 day ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago