ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. 23.6 ಕಿಮೀ ಉದ್ದದ ಸುರಂಗ ಮಾರ್ಗವು ನಿರ್ಮಾಣವಾಗಲಿದ್ದು ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದು, ಈ ಯೋಜನೆ ಪರಿಸರದ ಮೇಲೆ ಹಾನಿಯಾಗಲಿದೆ ಎಂದು ವಾದಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಎನ್ಎಚ್ 75 ರಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಸುರಂಗದ ಉದ್ದ 23.6 ಕಿ.ಮೀ. ಇದ್ದು, ಯೋಜನೆಯ ಟೆಂಡರ್ ಇತ್ಯಾದಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಸುರಂಗ ನಿರ್ಮಾಣಕ್ಕಾಗಿ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಭಾರತೀಯ ವಿಜ್ಞಾನ ಸಂಸ್ಥೆ ನೀಡಿದೆ. ಅದರಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿದೆ.
ಪ್ರತೀ ವರ್ಷವೂ ಈ ಘಾಟಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿತ್ತು. ಬೆಂಗಳೂರು ಮತ್ತು ಮಂಗಳೂರು ನಡುವಿನ ಜೀವನಾಡಿಯಾಗಿರುವ ಶಿರಾಡಿ ಘಾಟ್ ಮೂಲಕ ಸಾವಿರಾರು ಸರಕುಗಳು ಮತ್ತು ಪ್ರಯಾಣಿಕ ವಾಹನಗಳು ಓಡಾಡುತ್ತವೆ. ಮಳೆಗಾಲ ಈ ರಸ್ತೆ ಸಮಸ್ಯೆಯಾಗುವುದರಿಂದ ಕೇಂದ್ರ ಸರಕಾರವು ಸುರಂಗ ಮಾರ್ಗ ರಚನೆಗೆ ಯೋಜನೆ ರೂಪಿಸಿತ್ತು. ಇದೀಗ ಎಲ್ಲಾ ಸಿದ್ಧತೆಗಳು ನಡೆದಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕೆಲವೇ ವರ್ಷಗಳಲ್ಲಿ ಯೋಜನೆಯನ್ನು ಜಾರಿಯಾಗಬಹುದು.
ಈ ನಡುವೆ ಹಲವು ವಿರೋಧಗಳು ವ್ಯಕ್ತವಾಗಿದೆ. ಶಿರಾಡಿ ಘಾಟ್ನಲ್ಲಿ ಸುರಂಗ ನಿರ್ಮಾಣಕ್ಕೆ ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯು ಪಶ್ಚಿಮ ಘಟ್ಟದ ಪರಿಸರವನ್ನು ಹಾನಿಗೊಳಿಸುತ್ತದೆ ಮತ್ತು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಭೂಕುಸಿತಕ್ಕೆ ಕಾರಣವಾಗುತ್ತದೆ ಎಂದು ಪರಿಸರವಾದಿಗಳು ಹೇಳುತ್ತಾರೆ. ಹೀಗಾಗಿ ಇಂತಹ ಯೋಜನೆ ಬೇಡ ಎಂದು ಒತ್ತಾಯ ಮಾಡುತ್ತಿದ್ದಾರೆ.
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…