Advertisement
MIRROR FOCUS

ಶಿರಾಡಿಯಲ್ಲಿ ನಿರ್ಮಾಣವಾಗಲಿದೆ ಸುರಂಗ ಮಾರ್ಗ | ಪರಿಸರವಾದಿಗಳ ಆತಂಕ |

Share

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. 23.6 ಕಿಮೀ ಉದ್ದದ ಸುರಂಗ ಮಾರ್ಗವು ನಿರ್ಮಾಣವಾಗಲಿದ್ದು ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದು, ಈ ಯೋಜನೆ ಪರಿಸರದ ಮೇಲೆ ಹಾನಿಯಾಗಲಿದೆ ಎಂದು ವಾದಿಸಿದ್ದಾರೆ.

Advertisement
Advertisement
Advertisement
Advertisement
Advertisement

ರಾಷ್ಟ್ರೀಯ ಹೆದ್ದಾರಿ ಎನ್‌ಎಚ್ 75 ರಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಸುರಂಗದ ಉದ್ದ 23.6 ಕಿ.ಮೀ. ಇದ್ದು,  ಯೋಜನೆಯ ಟೆಂಡರ್ ಇತ್ಯಾದಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಸುರಂಗ ನಿರ್ಮಾಣಕ್ಕಾಗಿ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಭಾರತೀಯ ವಿಜ್ಞಾನ ಸಂಸ್ಥೆ ನೀಡಿದೆ. ಅದರಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿದೆ.

Advertisement

ಪ್ರತೀ ವರ್ಷವೂ ಈ ಘಾಟಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿತ್ತು. ಬೆಂಗಳೂರು ಮತ್ತು ಮಂಗಳೂರು ನಡುವಿನ ಜೀವನಾಡಿಯಾಗಿರುವ ಶಿರಾಡಿ ಘಾಟ್ ಮೂಲಕ ಸಾವಿರಾರು ಸರಕುಗಳು ಮತ್ತು ಪ್ರಯಾಣಿಕ ವಾಹನಗಳು ಓಡಾಡುತ್ತವೆ. ಮಳೆಗಾಲ ಈ ರಸ್ತೆ ಸಮಸ್ಯೆಯಾಗುವುದರಿಂದ ಕೇಂದ್ರ ಸರಕಾರವು ಸುರಂಗ ಮಾರ್ಗ ರಚನೆಗೆ ಯೋಜನೆ ರೂಪಿಸಿತ್ತು. ಇದೀಗ ಎಲ್ಲಾ ಸಿದ್ಧತೆಗಳು ನಡೆದಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕೆಲವೇ ವರ್ಷಗಳಲ್ಲಿ ಯೋಜನೆಯನ್ನು ಜಾರಿಯಾಗಬಹುದು.

Advertisement

ಈ ನಡುವೆ ಹಲವು ವಿರೋಧಗಳು ವ್ಯಕ್ತವಾಗಿದೆ. ಶಿರಾಡಿ ಘಾಟ್‌ನಲ್ಲಿ  ಸುರಂಗ ನಿರ್ಮಾಣಕ್ಕೆ ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯು ಪಶ್ಚಿಮ ಘಟ್ಟದ ​​ಪರಿಸರವನ್ನು ಹಾನಿಗೊಳಿಸುತ್ತದೆ ಮತ್ತು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಭೂಕುಸಿತಕ್ಕೆ ಕಾರಣವಾಗುತ್ತದೆ ಎಂದು ಪರಿಸರವಾದಿಗಳು ಹೇಳುತ್ತಾರೆ. ಹೀಗಾಗಿ ಇಂತಹ ಯೋಜನೆ ಬೇಡ ಎಂದು ಒತ್ತಾಯ ಮಾಡುತ್ತಿದ್ದಾರೆ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

12 mins ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

38 mins ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

52 mins ago

ಹಾಲಿನ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…

54 mins ago

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

10 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

11 hours ago