ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. 23.6 ಕಿಮೀ ಉದ್ದದ ಸುರಂಗ ಮಾರ್ಗವು ನಿರ್ಮಾಣವಾಗಲಿದ್ದು ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದು, ಈ ಯೋಜನೆ ಪರಿಸರದ ಮೇಲೆ ಹಾನಿಯಾಗಲಿದೆ ಎಂದು ವಾದಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಎನ್ಎಚ್ 75 ರಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಸುರಂಗದ ಉದ್ದ 23.6 ಕಿ.ಮೀ. ಇದ್ದು, ಯೋಜನೆಯ ಟೆಂಡರ್ ಇತ್ಯಾದಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಸುರಂಗ ನಿರ್ಮಾಣಕ್ಕಾಗಿ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಭಾರತೀಯ ವಿಜ್ಞಾನ ಸಂಸ್ಥೆ ನೀಡಿದೆ. ಅದರಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿದೆ.
ಪ್ರತೀ ವರ್ಷವೂ ಈ ಘಾಟಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿತ್ತು. ಬೆಂಗಳೂರು ಮತ್ತು ಮಂಗಳೂರು ನಡುವಿನ ಜೀವನಾಡಿಯಾಗಿರುವ ಶಿರಾಡಿ ಘಾಟ್ ಮೂಲಕ ಸಾವಿರಾರು ಸರಕುಗಳು ಮತ್ತು ಪ್ರಯಾಣಿಕ ವಾಹನಗಳು ಓಡಾಡುತ್ತವೆ. ಮಳೆಗಾಲ ಈ ರಸ್ತೆ ಸಮಸ್ಯೆಯಾಗುವುದರಿಂದ ಕೇಂದ್ರ ಸರಕಾರವು ಸುರಂಗ ಮಾರ್ಗ ರಚನೆಗೆ ಯೋಜನೆ ರೂಪಿಸಿತ್ತು. ಇದೀಗ ಎಲ್ಲಾ ಸಿದ್ಧತೆಗಳು ನಡೆದಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕೆಲವೇ ವರ್ಷಗಳಲ್ಲಿ ಯೋಜನೆಯನ್ನು ಜಾರಿಯಾಗಬಹುದು.
ಈ ನಡುವೆ ಹಲವು ವಿರೋಧಗಳು ವ್ಯಕ್ತವಾಗಿದೆ. ಶಿರಾಡಿ ಘಾಟ್ನಲ್ಲಿ ಸುರಂಗ ನಿರ್ಮಾಣಕ್ಕೆ ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯು ಪಶ್ಚಿಮ ಘಟ್ಟದ ಪರಿಸರವನ್ನು ಹಾನಿಗೊಳಿಸುತ್ತದೆ ಮತ್ತು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಭೂಕುಸಿತಕ್ಕೆ ಕಾರಣವಾಗುತ್ತದೆ ಎಂದು ಪರಿಸರವಾದಿಗಳು ಹೇಳುತ್ತಾರೆ. ಹೀಗಾಗಿ ಇಂತಹ ಯೋಜನೆ ಬೇಡ ಎಂದು ಒತ್ತಾಯ ಮಾಡುತ್ತಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…