Advertisement
MIRROR FOCUS

ಸಂಪಾಜೆ-ಮಡಿಕೇರಿ ಹೆದ್ದಾರಿ ರಾತ್ರಿ ಸಂಚಾರ ಬಂದ್ | ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತದ ಭೀತಿ |ಈಗ ಮಂಗಳೂರು-ಬೆಂಗಳೂರಿಗೆ ದಾರಿ ಯಾವುದು …?

Share

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದೆ. ಮಂಗಳೂರು-ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸಂಪಾಜೆಯ ಕರ್ತೋಜಿ ಎಂಬಲ್ಲಿಯೂ ಕುಸಿತದ ಭೀತಿ ಇದೆ. ಎರಡು ದಿನಗಳಿಂದಲೇ ಮಡಿಕೇರಿ ಸಂಪಾಜೆ ರಸ್ತೆಯ ನಡುವೆ ಕುಸಿತ ಉಂಟಾಗಿತ್ತು. ಇದೀಗ ಸಂಪಾಜೆ-ಮಡಿಕೇರಿ ರಸ್ತೆ ಸಂಚಾರ ಇಂದು ರಾತ್ರಿಯಿಂದಲೇ ಎಲ್ಲಾ ರೀತಿಯ ವಾಹನಗಳ ಸಂಚಾರವು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಲಾಗಿದೆ. ಹಗಲು ಮಾತ್ರಾ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ.

ಮುಂದಿನ ಎರಡು ದಿನಗಳ ಕಾಲ ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಮಡಿಕೇರಿ ಸಂಪಾಜೆ ರಸ್ತೆಯ ನಡುವೆ ರಾತ್ರಿ ವೇಳೆ ಮಾತ್ರಾ ಸ್ಥಗಿತಗೊಳಿಸಲಾಗಿದೆ. ಮುಂದಿನ 4 ದಿನಗಳ ಕಾಲ  ಅಂದರೆ ಜು.18 ರಿಂದ 22 ರವೆರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಸಂಪಾಜೆ-ಮಡಿಕೇರಿ ವಾಹನ ಸಂಚಾರದ ಆದೇಶ

ಇದೇ ವೇಳೆ ಶಿರಾಡಿ ಘಾಟಿಯಲ್ಲಿ ಸದ್ಯ ವಾಹನ ಸಂಚಾರ ಓಡಾಟ ನಡೆಯುತ್ತಿದೆ. ರಾತ್ರಿ ವೇಳೆ ಟ್ಯಾಂಕರ್‌ ಓಡಾಟ  ಸ್ಥಗಿತಗೊಂಡಿದೆ.ಶಿರಾಡಿ ಹಾಗೂ ಆಸುಪಾಸಿನಲ್ಲಿ ಇದುವರೆಗೆ ಯಾವುದೇ ಸಮಸ್ಯೆಯಾಗಿಲ್ಲ. ಶಿರಾಡಿ ಘಾಟಿಯ  ಪ್ರದೇಶದಲ್ಲಿ ಬೆಳಗ್ಗೆ ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಹೀಗಾಗಿ ಶಿರಾಡಿ ಘಾಟಿ ಮೂಲಕ ವಾಹನ ಸಂಚಾರ ಆರಂಭಗೊಂಡಿತ್ತು. ಭಾರೀ ಮಳೆಯಾಗುತ್ತಿರುವ ಕಾರಣದಿಂದ ಮತ್ತೆ ಕುಸಿದ ಭೀತಿ ಇದೆ. ( ಶಿರಾಡಿಯಲ್ಲಿ ವಾಹನ ಓಡಾಟದ ವಿಡಿಯೋ ಇಲ್ಲಿದೆ…).ಹೀಗಾಗಿ, ಘಾಟಿ ರಸ್ತೆಯಲ್ಲಿ ತುರ್ತು ಕಾಮಗಾರಿಗಳು ನಡೆಯಬೇಕಿರುವುದರಿಂದ ಶುಕ್ರವಾರದಿಂದ ಕಾಮಗಾರಿ ಮುಗಿಯುವವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸ್ಥಗಿತಗೊಳಸಲಾಗುತ್ತಿದೆ. ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಓಡಾಡುವ ಪ್ರಯಾಣಿಕರು ಹಾಸನ-ಬೇಲೂರು-ಮೂಡಿಗೆರೆ-ಚಾರ್ಮಾಡಿ ಮಾರ್ಗವಾಗಿ ಸಂಚರಿಸಲು ಸೂಚಿಸಿದ್ದಾರೆ.

ಶಿರಾಡಿ ರಸ್ತೆ ಸಂಚಾರ ಬಂದ್‌ – ಆದೇಶ

From tonight, vehicular traffic on the Sampaje-Madikeri road is prohibited between 8 pm and 6 am. However, vehicular movement is still allowed at Shiradi Ghati.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

5 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

6 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago