ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದೆ. ಮಂಗಳೂರು-ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸಂಪಾಜೆಯ ಕರ್ತೋಜಿ ಎಂಬಲ್ಲಿಯೂ ಕುಸಿತದ ಭೀತಿ ಇದೆ. ಎರಡು ದಿನಗಳಿಂದಲೇ ಮಡಿಕೇರಿ ಸಂಪಾಜೆ ರಸ್ತೆಯ ನಡುವೆ ಕುಸಿತ ಉಂಟಾಗಿತ್ತು. ಇದೀಗ ಸಂಪಾಜೆ-ಮಡಿಕೇರಿ ರಸ್ತೆ ಸಂಚಾರ ಇಂದು ರಾತ್ರಿಯಿಂದಲೇ ಎಲ್ಲಾ ರೀತಿಯ ವಾಹನಗಳ ಸಂಚಾರವು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಲಾಗಿದೆ. ಹಗಲು ಮಾತ್ರಾ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ.
ಮುಂದಿನ ಎರಡು ದಿನಗಳ ಕಾಲ ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಮಡಿಕೇರಿ ಸಂಪಾಜೆ ರಸ್ತೆಯ ನಡುವೆ ರಾತ್ರಿ ವೇಳೆ ಮಾತ್ರಾ ಸ್ಥಗಿತಗೊಳಿಸಲಾಗಿದೆ. ಮುಂದಿನ 4 ದಿನಗಳ ಕಾಲ ಅಂದರೆ ಜು.18 ರಿಂದ 22 ರವೆರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ ಶಿರಾಡಿ ಘಾಟಿಯಲ್ಲಿ ಸದ್ಯ ವಾಹನ ಸಂಚಾರ ಓಡಾಟ ನಡೆಯುತ್ತಿದೆ. ರಾತ್ರಿ ವೇಳೆ ಟ್ಯಾಂಕರ್ ಓಡಾಟ ಸ್ಥಗಿತಗೊಂಡಿದೆ.ಶಿರಾಡಿ ಹಾಗೂ ಆಸುಪಾಸಿನಲ್ಲಿ ಇದುವರೆಗೆ ಯಾವುದೇ ಸಮಸ್ಯೆಯಾಗಿಲ್ಲ. ಶಿರಾಡಿ ಘಾಟಿಯ ಪ್ರದೇಶದಲ್ಲಿ ಬೆಳಗ್ಗೆ ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಹೀಗಾಗಿ ಶಿರಾಡಿ ಘಾಟಿ ಮೂಲಕ ವಾಹನ ಸಂಚಾರ ಆರಂಭಗೊಂಡಿತ್ತು. ಭಾರೀ ಮಳೆಯಾಗುತ್ತಿರುವ ಕಾರಣದಿಂದ ಮತ್ತೆ ಕುಸಿದ ಭೀತಿ ಇದೆ. ( ಶಿರಾಡಿಯಲ್ಲಿ ವಾಹನ ಓಡಾಟದ ವಿಡಿಯೋ ಇಲ್ಲಿದೆ…).ಹೀಗಾಗಿ, ಘಾಟಿ ರಸ್ತೆಯಲ್ಲಿ ತುರ್ತು ಕಾಮಗಾರಿಗಳು ನಡೆಯಬೇಕಿರುವುದರಿಂದ ಶುಕ್ರವಾರದಿಂದ ಕಾಮಗಾರಿ ಮುಗಿಯುವವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸ್ಥಗಿತಗೊಳಸಲಾಗುತ್ತಿದೆ. ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಓಡಾಡುವ ಪ್ರಯಾಣಿಕರು ಹಾಸನ-ಬೇಲೂರು-ಮೂಡಿಗೆರೆ-ಚಾರ್ಮಾಡಿ ಮಾರ್ಗವಾಗಿ ಸಂಚರಿಸಲು ಸೂಚಿಸಿದ್ದಾರೆ.
From tonight, vehicular traffic on the Sampaje-Madikeri road is prohibited between 8 pm and 6 am. However, vehicular movement is still allowed at Shiradi Ghati.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…