Advertisement
MIRROR FOCUS

ಸಂಪಾಜೆ-ಮಡಿಕೇರಿ ಹೆದ್ದಾರಿ ರಾತ್ರಿ ಸಂಚಾರ ಬಂದ್ | ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತದ ಭೀತಿ |ಈಗ ಮಂಗಳೂರು-ಬೆಂಗಳೂರಿಗೆ ದಾರಿ ಯಾವುದು …?

Share

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದೆ. ಮಂಗಳೂರು-ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸಂಪಾಜೆಯ ಕರ್ತೋಜಿ ಎಂಬಲ್ಲಿಯೂ ಕುಸಿತದ ಭೀತಿ ಇದೆ. ಎರಡು ದಿನಗಳಿಂದಲೇ ಮಡಿಕೇರಿ ಸಂಪಾಜೆ ರಸ್ತೆಯ ನಡುವೆ ಕುಸಿತ ಉಂಟಾಗಿತ್ತು. ಇದೀಗ ಸಂಪಾಜೆ-ಮಡಿಕೇರಿ ರಸ್ತೆ ಸಂಚಾರ ಇಂದು ರಾತ್ರಿಯಿಂದಲೇ ಎಲ್ಲಾ ರೀತಿಯ ವಾಹನಗಳ ಸಂಚಾರವು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಲಾಗಿದೆ. ಹಗಲು ಮಾತ್ರಾ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ.

ಮುಂದಿನ ಎರಡು ದಿನಗಳ ಕಾಲ ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಮಡಿಕೇರಿ ಸಂಪಾಜೆ ರಸ್ತೆಯ ನಡುವೆ ರಾತ್ರಿ ವೇಳೆ ಮಾತ್ರಾ ಸ್ಥಗಿತಗೊಳಿಸಲಾಗಿದೆ. ಮುಂದಿನ 4 ದಿನಗಳ ಕಾಲ  ಅಂದರೆ ಜು.18 ರಿಂದ 22 ರವೆರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಸಂಪಾಜೆ-ಮಡಿಕೇರಿ ವಾಹನ ಸಂಚಾರದ ಆದೇಶ

ಇದೇ ವೇಳೆ ಶಿರಾಡಿ ಘಾಟಿಯಲ್ಲಿ ಸದ್ಯ ವಾಹನ ಸಂಚಾರ ಓಡಾಟ ನಡೆಯುತ್ತಿದೆ. ರಾತ್ರಿ ವೇಳೆ ಟ್ಯಾಂಕರ್‌ ಓಡಾಟ  ಸ್ಥಗಿತಗೊಂಡಿದೆ.ಶಿರಾಡಿ ಹಾಗೂ ಆಸುಪಾಸಿನಲ್ಲಿ ಇದುವರೆಗೆ ಯಾವುದೇ ಸಮಸ್ಯೆಯಾಗಿಲ್ಲ. ಶಿರಾಡಿ ಘಾಟಿಯ  ಪ್ರದೇಶದಲ್ಲಿ ಬೆಳಗ್ಗೆ ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಹೀಗಾಗಿ ಶಿರಾಡಿ ಘಾಟಿ ಮೂಲಕ ವಾಹನ ಸಂಚಾರ ಆರಂಭಗೊಂಡಿತ್ತು. ಭಾರೀ ಮಳೆಯಾಗುತ್ತಿರುವ ಕಾರಣದಿಂದ ಮತ್ತೆ ಕುಸಿದ ಭೀತಿ ಇದೆ. ( ಶಿರಾಡಿಯಲ್ಲಿ ವಾಹನ ಓಡಾಟದ ವಿಡಿಯೋ ಇಲ್ಲಿದೆ…).ಹೀಗಾಗಿ, ಘಾಟಿ ರಸ್ತೆಯಲ್ಲಿ ತುರ್ತು ಕಾಮಗಾರಿಗಳು ನಡೆಯಬೇಕಿರುವುದರಿಂದ ಶುಕ್ರವಾರದಿಂದ ಕಾಮಗಾರಿ ಮುಗಿಯುವವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸ್ಥಗಿತಗೊಳಸಲಾಗುತ್ತಿದೆ. ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಓಡಾಡುವ ಪ್ರಯಾಣಿಕರು ಹಾಸನ-ಬೇಲೂರು-ಮೂಡಿಗೆರೆ-ಚಾರ್ಮಾಡಿ ಮಾರ್ಗವಾಗಿ ಸಂಚರಿಸಲು ಸೂಚಿಸಿದ್ದಾರೆ.

ಶಿರಾಡಿ ರಸ್ತೆ ಸಂಚಾರ ಬಂದ್‌ – ಆದೇಶ

From tonight, vehicular traffic on the Sampaje-Madikeri road is prohibited between 8 pm and 6 am. However, vehicular movement is still allowed at Shiradi Ghati.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago