ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯ ಸಕಲೇಶಪುರ ದೋಣಿಗಾಲ್ ಸಮೀಪದಲ್ಲಿ ಭೂ ಕುಸಿತ ಸಂಭವಿಸಿದೆ. ಇದರಿಂದಾಗಿ ಮಂಗಳೂರು-ಬೆಂಗಳೂರು ವಾಹನ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಹಾಸನ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಶಿರಾಡಿ ಘಾಟಿ ರಸ್ತೆ ಸಂಚಾರ ಮಾರ್ಗವನ್ನು ಬಂದ್ ಮಾಡಿದೆ. ಜೊತೆಗೆ ಚಾರ್ಮಾಡಿ ಘಾಟಿ ಮೂಲಕ ವಾಹನ ಸವಾರರು ತೆರಳುವಂತೆ ಸಂಚಾರಕ್ಕಾಗಿ ಪರ್ಯಾಯ ಮಾರ್ಗವನ್ನು ಸೂಚಿಸಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ರಸ್ತೆ ಕುಸಿತಗೊಂಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel