Advertisement
MIRROR FOCUS

ಶಿರೂರು ಗುಡ್ಡ ಕುಸಿತ ಪ್ರಕರಣ | ನದಿಯಲ್ಲಿ ತೇಲಿ ಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ನೀರು, ಗಾಳಿಯಲ್ಲಿ 18 ಕ್ವಿಂಟಲ್ ಗ್ಯಾಸ್ ಹೊರಕ್ಕೆ

Share
ಉತ್ತರ ಕನ್ನಡ ಜಿಲ್ಲೆಯ (Uttara kannada) ಅಂಕೋಲಾ ತಾಲೂಕಿನ ಶಿರೂರು(Shirur) ಬಳಿ ಕುಸಿದಿದ್ದ ಗುಡ್ಡ(Land slide) ತೆರವು ಕಾರ್ಯಾಚರಣೆ 4ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೆ ಆರು ಜನರ ಶವ ಪತ್ತೆಯಾಗಿವೆ. ಈ ಮಧ್ಯೆ ಶಿರೂರು ಗುಡ್ಡ ಕುಸಿತದ ರಭಸಕ್ಕೆ ಹೆದ್ದಾರಿಯಿಂದ ಗಂಗಾವಳಿ ನದಿಗೆ ಉರುಳಿಬಿದ್ದು ಸಡಗೇರಿ ಬಳಿ ಕೊಚ್ಚಿ ಹೋಗಿದ್ದ ಎಚ್.ಪಿ.ಗ್ಯಾಸ್ ಟ್ಯಾಂಕರ್​ನಿಂದ(Gas Tanker) ಗ್ಯಾಸ್ ಹೊರಬಿಟ್ಟು ಖಾಲಿ(Gas leakage) ಮಾಡುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆ ನಡೆದ ಸ್ಥಳದಿಂದ ಹಲವು ಕಿ.ಮೀಗಳಷ್ಟು ನದಿಯಲ್ಲಿ ತೇಲಿ ಹೋಗಿದ್ದ ಟ್ಯಾಂಕರ್ ಅನ್ನು ಸಗಡಗೇರಿಯ ಸಮೀಪದಲ್ಲಿ ನಿಲ್ಲಿಸಲಾಗಿದೆ. ಕೋಸ್ಟ್ ಗಾರ್ಡ್(Coast Guards) ಸಮ್ಮುಖದಲ್ಲಿ ಕಂಪೆನಿಯ ತಜ್ಞರು ಟ್ಯಾಂಕರ್​ನಲ್ಲಿದ್ದ 18 ಕ್ವಿಂಟಲ್ ಗ್ಯಾಸ್ ಹೊರಬಿಡುತ್ತಿದ್ದಾರೆ. ಶೇ 60ರಷ್ಟು ಗ್ಯಾಸ್ ಅನ್ನು ನದಿಗೆ ಬಿಡಲಾಗುತ್ತಿದೆ.
ಶಿರೂರು ಗುಡ್ಡ ಕುಸಿತದ ರಭಸಕ್ಕೆ ಹೆದ್ದಾರಿಯಿಂದ ಗಂಗಾವಳಿ ನದಿಗೆ ಉರುಳಿಬಿದ್ದು ಸಡಗೇರಿ ಬಳಿ ಕೊಚ್ಚಿ ಹೋಗಿದ್ದ ಎಚ್.ಪಿ.ಗ್ಯಾಸ್ ಟ್ಯಾಂಕರ್​ನಿಂದ ಗ್ಯಾಸ್ ಹೊರಬಿಟ್ಟು ಖಾಲಿ ಮಾಡುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆ ನಡೆದ ಸ್ಥಳದಿಂದ ಹಲವು ಕಿ.ಮೀಗಳಷ್ಟು ನದಿಯಲ್ಲಿ ತೇಲಿ ಹೋಗಿದ್ದ ಟ್ಯಾಂಕರ್ ಅನ್ನು ಸಗಡಗೇರಿಯ ಸಮೀಪದಲ್ಲಿ ನಿಲ್ಲಿಸಲಾಗಿದೆ.
ಕೋಸ್ಟ್ ಗಾರ್ಡ್ ಸಮ್ಮುಖದಲ್ಲಿ ಕಂಪೆನಿಯ ತಜ್ಞರು ಟ್ಯಾಂಕರ್​ನಲ್ಲಿದ್ದ 18 ಕ್ವಿಂಟಾಲ್ ಗ್ಯಾಸ್ ಹೊರಬಿಡುತ್ತಿದ್ದಾರೆ. ಶೇ 60ರಷ್ಟು ಗ್ಯಾಸ್ ಅನ್ನು ನದಿಗೆ ಬಿಡಲಾಗುತ್ತಿದೆ.ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್, ಎಸ್​ಡಿಆರ್​ಎಫ್, ಎನ್‌ಡಿಆರ್‌ಎಫ್, ಹೆಚ್​ಪಿ ಕಂಪನಿಯ ಸಿಬ್ಬಂದಿ, ವೈದ್ಯಕೀಯ ತಂಡದವರು ಸ್ಥಳದಲ್ಲಿದ್ದಾರೆ. ಟ್ಯಾಂಕರ್​ನಲ್ಲಿರುವ ಗ್ಯಾಸ್ ಅನ್ನು ಮೀಟರ್ ಮಾಪನನಿಂದ ಅಳೆದು ನದಿ ಹಾಗೂ ಗಾಳಿಯಲ್ಲಿ ಬಿಡಲಾಗುತ್ತಿದೆ.  ಸಗಡಗೇರಿ ಗ್ರಾಮದ 34 ಕುಟುಂಬಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಮೊಬೈಲ್, ವಾಹನ ಸಂಚಾರ, ಒಲೆ ಉರಿಸುವುದು, ಸಾರ್ವಜನಿಕರ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಊರಿನ ಸುತ್ತ ಡಂಗೂರ ಕೂಡಾ ಸಾರಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದು 20ಕ್ಕೂ ಹೆಚ್ಚು ಜನರು ಮೃತರಾಗಿರುವ ಬಗ್ಗೆ ಶಂಕೆ ವ್ಯಕ್ತ ಆಗುವುದರ ಜೊತೆಗೆ ಇನ್ನಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ ತಜ್ಞ ಸಂಜೀವ್ ಎಂಬವರು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈಗಾಗಲೇ ಗುಡ್ಡ ಕುಸಿತ ಆಗಿರುವ ಬಗ್ಗೆ ಬಹಳಷ್ಟು ಚರ್ಚೆ ಆಗುತ್ತಿದೆ. ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದ್ದರಿಂದ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಭೂ ಕುಸಿತದ ಬಗ್ಗೆ ಅಧ್ಯಯನ ಮಾಡಲಿದೆ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

20 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

23 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago