ಸಾಕು ಪ್ರಾಣಿಗಳಿಗೆ,ಪಶುಗಳಿಗೆ,ಮನುಷ್ಯರಿಗೆ ಸಂಕಟ ಬಂದಾಗ ದೈವ-ದೇವರನ್ನು ನೆನಪಾಗುತ್ತದೆ. ಇಲ್ಲೂ ಹಾಗೆ, ಏನಾದರೂ ಸಂಕಟವಾದರೆ ತಕ್ಷಣ ನೆನಪಾಗುವುದು ಈ ದೈವ. ಹೀಗಾಗಿ ಇಲ್ಲಿ ಜೋಡಿ ದೈವಗಳಿಗೆ ಕೋಳಿ ಹಾರಿಸುದಾಗಿ ಪ್ರಾಥಿ೯ಸಿದರೆ ಸಂಕಷ್ಠ ದೂರವಾಗುವುದೆಂದು ನಂಬಿಕೆ ಇದೆ. ಈ ವಿಶೇಷವಾದ ದೈವದ ಕೋಲ ನಡೆಯುವುದು ಶಿಶಿಲೇಶ್ವರ ದೇವರ ಜಾತ್ರಾ ಸಮಯದಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲೇಶ್ವರ ದೇವರ ಜಾತ್ರಾ ಸಮಯದಲ್ಲಿ ಕಿಲಮರಿತ್ತಾಯ ಜೋಡು ನೇಮವು ವೈಶಿಷ್ಟ್ಯವನ್ನು ಪಡೆದಿದೆ. ಜಾತ್ರಾ ಆರಂಭದ ದಿನ ಹಾಗೂ ಮರುದಿನ ಈ ನೇಮೋತ್ಸವ ನಡೆದುಕೊಂಡು ಬರುತ್ತಿದೆ. ದೈವರಾದನೆಯಲ್ಲಿ ದೈವದ ಅಣಿಗಳಿಗೆ ಮಹತ್ವದ ಪ್ರಾಧಾನ್ಯತೆ ಇದ್ದು, ಶಿಶಿಲದಲ್ಲಿರುವ ಕಿಲಮರಿತ್ತಾಯನ ಅಣಿ ಉಳಿದ ದೈವಗಳಂತಲ್ಲ. ಈ ದೈವದ ಅಣಿಯು ದೈವದ ಮುಂಭಾಗದಲ್ಲಿ ಇರುವುದೇ ಇಲ್ಲಿನ ವಿಶೇಷ. ಕಿಲಮರಿತ್ತಾಯ ಜೋಡಿ ದೈವಗಳಿಗೆ ನೇಮದ ಕೊನೆಯ ಹಂತದಲ್ಲಿ ಜೀವಂತ ಕೋಳಿಯನ್ನು ಅಡಿಕೆ ಹಾಳೆಯಿಂದ ನಿಮಿ೯ಸಿದ ದೈವದ ಅಣಿ ಮತ್ತುದೈವಕ್ಕೆ ಜೀವಂತ ಕೋಳಿ ಹಾರಿಸುವ ಪದ್ದತಿ ಇದೆ.ಹಾರಿಸಿದ ಕೋಳಿಗಳನ್ನು ನತ೯ಕ ಕುಟುಂಬಸ್ಥರು ಸಾಕಾಣಿಕೆ ಮಾಡುತ್ತಾರೆ.ಜೋಡಿ ದೈವಗಳಿಗೆ ಕೋಳಿ ಹಾರಿಸುದಾಗಿ ಪ್ರಾಥಿ೯ಸಿದರೆ ಸಂಕಷ್ಠ ದೂರವಾಗುವುದೆಂದು ನಂಬಿಕೆ ಇದೆ.
ಸಾಕು ಪ್ರಾಣಿಗಳಿಗೆ,ಪಶುಗಳಿಗೆ,ಮನುಷ್ಯರಿಗೆ ಸಂಕಟ ಬಂದಾಗ ಕಿಲಮರಿತ್ತಾಯ ಜೋಡಿ ದೈವಗಳಿಗೆ ನೇಮದ ಕೊನೆಯ ಹಂತದಲ್ಲಿ ಜೀವಂತ ಕೋಳಿಯನ್ನು ಅಡಿಕೆ ಹಾಳೆಯಿಂದ ನಿಮಿ೯ಸಿದ ದೈವದ ಅಣಿ ಮತ್ತುದೈವಕ್ಕೆ ಜೀವಂತ ಕೋಳಿ ಹಾರಿಸುತ್ತಾರೆ.
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…