Advertisement
ಸುದ್ದಿಗಳು

#RishabhShetty| ಸದ್ದಿಲ್ಲದೆ ವಿದೇಶದಾದ್ಯಂತ ಪ್ರದರ್ಶನ ಕಂಡ `ಶಿವಮ್ಮ` | ಪ್ರಶಸ್ತಿಗಳ ಸರಮಾಲೆಯನ್ನೇ ಹೊತ್ತು ತಂದ ಚಿತ್ರ |

Share

ಕರಾವಳಿ ಪ್ರತಿಭೆ ರಿಷಭ್ ಶೆಟ್ಟಿ ಒಂದಲ್ಲ ಒಂದು ಪ್ರಯೋಗಳನ್ನು ಮಾಡುತ್ತಲೇ ಇರುತ್ತಾರೆ. ತಾವು ಸಿನಿಮಾ ಮಾಡೋದು, ನಟಿಸೋದು ಬಿಟ್ಟು ಅದರಾಚೆಗೆ ತಮ್ಮ ಬ್ಯಾನರ್ ಅಡಿಯಲ್ಲಿ ಅನೇಕ ಹೊಸ ಪ್ರತಿಭೆಗಳಿಗೆ, ನವ ಯುವಕರಿಗೆ ಅವಕಾಶಗಳನ್ನು ನೀಡುತ್ತಿರುತ್ತಾರೆ. ಇದೀಗ ಇವರ ಬ್ಯಾನರ್ ಅಡಿಯಲ್ಲಿ ಬಂದ ಹೊಸೊಬ್ಬರ ಚಿತ್ರವೊಂದು ಭಾರಿ ಪ್ರಶಸ್ತಿಗಳ ಸುರಿಮಳೆಯನ್ನೇ ಪಡೆದುಕೊಂಡಿದೆ.

ದೊಡ್ಡ ಬಜೆಟ್ಟಿನ ಚಿತ್ರಗಳ ಅಬ್ಬರದ ನಡುವೆ ಕನ್ನಡದ ಕೆಲವು ಸಣ್ಣ ಸಿನಿಮಾಗಳು ಭಾರತದ ಗಡಿಯಾಚೆಗೆ ಸಂಚರಿಸಿ ಅಲ್ಲಿನ ಚಿತ್ರೋತ್ಸವಗಳಲ್ಲಿ ಮನ್ನಣೆ ಗಳಿಸಿ ಕನ್ನಡ ಚಿತ್ರೋದ್ಯಮದ ಕೀರ್ತಿ ಪತಾಕೆಯನ್ನು ಹಾರಿಸಿವೆ. ಅದರಲ್ಲಿ ನಮ್ಮ ರಿಷಬ್ ಶೆಟ್ಟಿ  ಸಂಸ್ಥೆಯ ‘ಶಿವಮ್ಮ’ಚಿತ್ರ ಪ್ರಪಂಚಾದ್ಯಂತ ತನ್ನ ತೆಕ್ಕೆಗೆ ಪ್ರಶಸ್ತಿ, ಪ್ರಶಂಸೆಯನ್ನು ಗಳಿಸಿ ತನ್ನ ವರ್ಲ್ಡ್ ಟೂರಿನ ಮ್ಯಾರಥಾನ್ ಅನ್ನು ಮುಂದುವರಿಸಿದೆ.

ಇದು ಜೈ ಶಂಕರ್ ಆರ್ಯರ್, ನಿರ್ದೇಶನದ ಚೊಚ್ಚಲ ಚಿತ್ರ. ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಹಲವಾರು ಪ್ರಶಸ್ತಿ, ಪ್ರಶಂಸೆಗಳನ್ನು ಗಳಿಸಿದ್ದಲ್ಲದೆ ವಿದೇಶಿಗರ ಪ್ರೀತಿಗೂ ಪಾತ್ರವಾದ ಈ ಸಿನಿಮಾ  ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಸಂಸ್ಥೆಯ ಹೆಮ್ಮೆಯ ಕೊಡುಗೆ.

ಈವರೆಗೂ ಶಿವಮ್ಮ  ಗೆದ್ದ  ಪ್ರಶಸ್ತಿಗಳ ಪಟ್ಟಿ ದೊಡ್ಡದಿದೆ. ನ್ಯೂ ಕರೆಂಟ್ಸ್ ಪುರಸ್ಕಾರ, ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2022, ಯಂಗ್ ಜೂರಿ ಪುರಸ್ಕಾರ, ಫೆಸ್ಟಿವಲ್ ಡೆಸ್ 3 ಕಾಂಟಿನೆಂಟಸ್, ನಾಂಟೆಸ್ 2022, ಅತ್ಯುತ್ತಮ ನಿರ್ದೇಶಕ, ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಗ್ರಾಂಡ್ ಪ್ರಿಕ್ಸ್  ಅಟ್ ಜೆರ್ಕೋಲೊ ಹೈನಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೀನಾ ಬ್ಲಾಕ್ ಮೂವಿ, ಸ್ವಿಟ್ಜರ್ಲ್ಯಾಂಡ್ ಫಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ , ಇರಾನ್ ಗೋಥೆಂಬರ್ಗ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಸ್ಪೀಡನ್ ಫಿಲ್ಮ್ ಫೆಸ್ಟ್ ಮುಂಚಿಯನ್, ಮ್ಯುನಿಚ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ , ರಷ್ಯಾ ಇಮೆಜಿನ್ ಇಂಡಿಯಾ, ಸ್ಪೇನ್ ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ, ಕೆನಡ ಇಂಡಿಯನ್ ಪಿಲ್ಮ್  ಫೆಸ್ಟಿವಲ್, ಮೆಲ್ಬೋರ್ನ್ ಅಂಡ್ರಿ ತರ್ಕೊವ್ಸ್ಕಿ  ಅಂತರ್ರಾಷ್ಟ್ರೀಯ ಚಿತ್ರೋತ್ಸವ  ಮುಂತಾದ ಚಿತ್ರೋತ್ಸವಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ಈ ಸಿನಿಮಾದ ಬಗ್ಗೆ ರಿಷಬ್ ಶೆಟ್ಟಿ ಹೆಮ್ಮೆಯಿಂದಲೇ ಮಾತನಾಡಿದ್ದಾರೆ. ಇಂತಹದ್ದೊಂದು ಸಿನಿಮಾ ತಮ್ಮದೇ ಬ್ಯಾನರ್ ನಲ್ಲಿ ಬಂದಿದ್ದು, ಸಹಜವಾಗಿಯೇ ಅವರಿಗೆ ಸಂಭ್ರಮ ತಂದಿದೆ. ಈ ಸಿನಿಮಾ ಇನ್ನೂ ಹಲವು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯಲಿ ಎಂದು ನಿರ್ದೇಶಕರಿಗೆ ರಿಷಬ್ ಹಾರೈಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

18 minutes ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

4 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

4 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

7 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

16 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

17 hours ago