ಕರಾವಳಿ ಪ್ರತಿಭೆ ರಿಷಭ್ ಶೆಟ್ಟಿ ಒಂದಲ್ಲ ಒಂದು ಪ್ರಯೋಗಳನ್ನು ಮಾಡುತ್ತಲೇ ಇರುತ್ತಾರೆ. ತಾವು ಸಿನಿಮಾ ಮಾಡೋದು, ನಟಿಸೋದು ಬಿಟ್ಟು ಅದರಾಚೆಗೆ ತಮ್ಮ ಬ್ಯಾನರ್ ಅಡಿಯಲ್ಲಿ ಅನೇಕ ಹೊಸ ಪ್ರತಿಭೆಗಳಿಗೆ, ನವ ಯುವಕರಿಗೆ ಅವಕಾಶಗಳನ್ನು ನೀಡುತ್ತಿರುತ್ತಾರೆ. ಇದೀಗ ಇವರ ಬ್ಯಾನರ್ ಅಡಿಯಲ್ಲಿ ಬಂದ ಹೊಸೊಬ್ಬರ ಚಿತ್ರವೊಂದು ಭಾರಿ ಪ್ರಶಸ್ತಿಗಳ ಸುರಿಮಳೆಯನ್ನೇ ಪಡೆದುಕೊಂಡಿದೆ.
ದೊಡ್ಡ ಬಜೆಟ್ಟಿನ ಚಿತ್ರಗಳ ಅಬ್ಬರದ ನಡುವೆ ಕನ್ನಡದ ಕೆಲವು ಸಣ್ಣ ಸಿನಿಮಾಗಳು ಭಾರತದ ಗಡಿಯಾಚೆಗೆ ಸಂಚರಿಸಿ ಅಲ್ಲಿನ ಚಿತ್ರೋತ್ಸವಗಳಲ್ಲಿ ಮನ್ನಣೆ ಗಳಿಸಿ ಕನ್ನಡ ಚಿತ್ರೋದ್ಯಮದ ಕೀರ್ತಿ ಪತಾಕೆಯನ್ನು ಹಾರಿಸಿವೆ. ಅದರಲ್ಲಿ ನಮ್ಮ ರಿಷಬ್ ಶೆಟ್ಟಿ ಸಂಸ್ಥೆಯ ‘ಶಿವಮ್ಮ’ಚಿತ್ರ ಪ್ರಪಂಚಾದ್ಯಂತ ತನ್ನ ತೆಕ್ಕೆಗೆ ಪ್ರಶಸ್ತಿ, ಪ್ರಶಂಸೆಯನ್ನು ಗಳಿಸಿ ತನ್ನ ವರ್ಲ್ಡ್ ಟೂರಿನ ಮ್ಯಾರಥಾನ್ ಅನ್ನು ಮುಂದುವರಿಸಿದೆ.
ಈವರೆಗೂ ಶಿವಮ್ಮ ಗೆದ್ದ ಪ್ರಶಸ್ತಿಗಳ ಪಟ್ಟಿ ದೊಡ್ಡದಿದೆ. ನ್ಯೂ ಕರೆಂಟ್ಸ್ ಪುರಸ್ಕಾರ, ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2022, ಯಂಗ್ ಜೂರಿ ಪುರಸ್ಕಾರ, ಫೆಸ್ಟಿವಲ್ ಡೆಸ್ 3 ಕಾಂಟಿನೆಂಟಸ್, ನಾಂಟೆಸ್ 2022, ಅತ್ಯುತ್ತಮ ನಿರ್ದೇಶಕ, ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಗ್ರಾಂಡ್ ಪ್ರಿಕ್ಸ್ ಅಟ್ ಜೆರ್ಕೋಲೊ ಹೈನಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೀನಾ ಬ್ಲಾಕ್ ಮೂವಿ, ಸ್ವಿಟ್ಜರ್ಲ್ಯಾಂಡ್ ಫಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ , ಇರಾನ್ ಗೋಥೆಂಬರ್ಗ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಸ್ಪೀಡನ್ ಫಿಲ್ಮ್ ಫೆಸ್ಟ್ ಮುಂಚಿಯನ್, ಮ್ಯುನಿಚ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ , ರಷ್ಯಾ ಇಮೆಜಿನ್ ಇಂಡಿಯಾ, ಸ್ಪೇನ್ ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ, ಕೆನಡ ಇಂಡಿಯನ್ ಪಿಲ್ಮ್ ಫೆಸ್ಟಿವಲ್, ಮೆಲ್ಬೋರ್ನ್ ಅಂಡ್ರಿ ತರ್ಕೊವ್ಸ್ಕಿ ಅಂತರ್ರಾಷ್ಟ್ರೀಯ ಚಿತ್ರೋತ್ಸವ ಮುಂತಾದ ಚಿತ್ರೋತ್ಸವಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಈ ಸಿನಿಮಾದ ಬಗ್ಗೆ ರಿಷಬ್ ಶೆಟ್ಟಿ ಹೆಮ್ಮೆಯಿಂದಲೇ ಮಾತನಾಡಿದ್ದಾರೆ. ಇಂತಹದ್ದೊಂದು ಸಿನಿಮಾ ತಮ್ಮದೇ ಬ್ಯಾನರ್ ನಲ್ಲಿ ಬಂದಿದ್ದು, ಸಹಜವಾಗಿಯೇ ಅವರಿಗೆ ಸಂಭ್ರಮ ತಂದಿದೆ. ಈ ಸಿನಿಮಾ ಇನ್ನೂ ಹಲವು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯಲಿ ಎಂದು ನಿರ್ದೇಶಕರಿಗೆ ರಿಷಬ್ ಹಾರೈಸಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…