Advertisement
ಸುದ್ದಿಗಳು

ಶಿವಂ ಶಿವೋಹಂ | ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಸಾಗಿಬರುತ್ತಿರುವ ಪಾದಯಾತ್ರಿಗಳು | ಭಕ್ತಾದಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ |

Share

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ನಡೆಯುವ ಶಿವರಾತ್ರಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಮೊದಲಾದ ಊರುಗಳಿಂದ ಪ್ರತಿ ವರ್ಷದಂತೆ ವಿವಿಧ ಪಾದಯಾತ್ರಿಗಳ ಸಂಘಟನೆಗಳ ಮೂಲಕ ಭಕ್ತಾದಿಗಳು ಶಿವನಾಮ ಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಆಗಮಿಸುತ್ತಿದ್ದಾರೆ. ಸುಮಾರು ಐವತ್ತು ಸಾವಿರ ಮಂದಿ ಪಾದಯಾತ್ರಿಗಳು ಈಗಾಗಲೆ ಧರ್ಮಸ್ಥಳಕ್ಕೆ ಬರುವುದಾಗಿ ಹೆಸರು ನೋಂದಾಯಿಸಿದ್ದಾರೆ.

ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಂಗಣ, ಅನ್ನಪೂರ್ಣ ಛತ್ರದ ಹಿಂಭಾಗ, ಗಂಗೋತ್ರಿ, ಸಾಕೇತ ವಸತಿಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಸ್ವಾಗತ ಕಾರ್ಯಾಲಯ ಹಾಗೂ ಮಾಹಿತಿ ಕಾರ್ಯಾಲಯ ತೆರೆದಿದ್ದು ಪಾದಯಾತ್ರಿಗಳ ಸ್ವಾಗತ ಮತ್ತು ಆತಿಥ್ಯಕ್ಕೆ ಸ್ವಯಂ ಸೇವಕರ ತಂಡ ಸಜ್ಜಾಗಿದೆ.

Advertisement

ಎಸ್.ಡಿ.ಎಂ. ಆಸ್ಪತ್ರೆಯ ಆಶ್ರಯದಲ್ಲಿ15 ಮಂದಿ ವೈದ್ಯರ ತಂಡ ಪಾದಯಾತ್ರಿಗಳ ಉಚಿತ ಸೇವೆಗೆ ಸಿದ್ದರಾಗಿದ್ದಾರೆ.
ಶಿವರಾತ್ರಿ ಜಾಗರಣೆ, ಉಪವಾಸ: ಶನಿವಾರ ಸಂಜೆ ಆರು ಗಂಟೆಗೆ ಧರ್ಮಸ್ಥಳದಲ್ಲಿ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡುವರು. ಅವರ ಪ್ರವಚನದ ಬಳಿಕ ಇಡೀ ರಾತ್ರಿ ಭಕ್ತರು ಶಿವನಾಮ ಸ್ಮರಣೆ, ಭಜನೆ, ಪ್ರಾರ್ಥನೆ, ಧ್ಯಾನದೊಂದಿಗೆ ಜಾಗರಣೆ ಮಾಡುವರು.

Advertisement

ದೇವಸ್ಥಾನದಲ್ಲಿ ಸಂಜೆ ಆರು ಗಂಟೆಯಿಂದ ನಾಲ್ಕು ಜಾವಗಳಲ್ಲಿ ಅಹೋರಾತ್ರಿ ಭಕ್ತರು ಶತರುದ್ರಾಭಿಷೇಕ, ಎಳನೀರು ಅಭಿಷೇಕ ಮಾಡಿ ಧನ್ಯತೆಯನ್ನು ಹೊಂದುವರು. ರಾತ್ರಿ ಇಡೀ ದೇವರ ದರ್ಶನಕ್ಕೆ ಅವಕಾಶವಿದ್ದು ಭಾನುವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯುತ್ತದೆ.  ಶಿವರಾತ್ರಿಗೆ ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಕೆ.ಎಸ್.ಆರ್.ಟಿ.ಸಿ. ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

14 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

15 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago