ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ನಡೆಯುವ ಶಿವರಾತ್ರಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಮೊದಲಾದ ಊರುಗಳಿಂದ ಪ್ರತಿ ವರ್ಷದಂತೆ ವಿವಿಧ ಪಾದಯಾತ್ರಿಗಳ ಸಂಘಟನೆಗಳ ಮೂಲಕ ಭಕ್ತಾದಿಗಳು ಶಿವನಾಮ ಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಆಗಮಿಸುತ್ತಿದ್ದಾರೆ. ಸುಮಾರು ಐವತ್ತು ಸಾವಿರ ಮಂದಿ ಪಾದಯಾತ್ರಿಗಳು ಈಗಾಗಲೆ ಧರ್ಮಸ್ಥಳಕ್ಕೆ ಬರುವುದಾಗಿ ಹೆಸರು ನೋಂದಾಯಿಸಿದ್ದಾರೆ.
ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಂಗಣ, ಅನ್ನಪೂರ್ಣ ಛತ್ರದ ಹಿಂಭಾಗ, ಗಂಗೋತ್ರಿ, ಸಾಕೇತ ವಸತಿಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಸ್ವಾಗತ ಕಾರ್ಯಾಲಯ ಹಾಗೂ ಮಾಹಿತಿ ಕಾರ್ಯಾಲಯ ತೆರೆದಿದ್ದು ಪಾದಯಾತ್ರಿಗಳ ಸ್ವಾಗತ ಮತ್ತು ಆತಿಥ್ಯಕ್ಕೆ ಸ್ವಯಂ ಸೇವಕರ ತಂಡ ಸಜ್ಜಾಗಿದೆ.
ಎಸ್.ಡಿ.ಎಂ. ಆಸ್ಪತ್ರೆಯ ಆಶ್ರಯದಲ್ಲಿ15 ಮಂದಿ ವೈದ್ಯರ ತಂಡ ಪಾದಯಾತ್ರಿಗಳ ಉಚಿತ ಸೇವೆಗೆ ಸಿದ್ದರಾಗಿದ್ದಾರೆ.
ಶಿವರಾತ್ರಿ ಜಾಗರಣೆ, ಉಪವಾಸ: ಶನಿವಾರ ಸಂಜೆ ಆರು ಗಂಟೆಗೆ ಧರ್ಮಸ್ಥಳದಲ್ಲಿ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡುವರು. ಅವರ ಪ್ರವಚನದ ಬಳಿಕ ಇಡೀ ರಾತ್ರಿ ಭಕ್ತರು ಶಿವನಾಮ ಸ್ಮರಣೆ, ಭಜನೆ, ಪ್ರಾರ್ಥನೆ, ಧ್ಯಾನದೊಂದಿಗೆ ಜಾಗರಣೆ ಮಾಡುವರು.
ದೇವಸ್ಥಾನದಲ್ಲಿ ಸಂಜೆ ಆರು ಗಂಟೆಯಿಂದ ನಾಲ್ಕು ಜಾವಗಳಲ್ಲಿ ಅಹೋರಾತ್ರಿ ಭಕ್ತರು ಶತರುದ್ರಾಭಿಷೇಕ, ಎಳನೀರು ಅಭಿಷೇಕ ಮಾಡಿ ಧನ್ಯತೆಯನ್ನು ಹೊಂದುವರು. ರಾತ್ರಿ ಇಡೀ ದೇವರ ದರ್ಶನಕ್ಕೆ ಅವಕಾಶವಿದ್ದು ಭಾನುವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯುತ್ತದೆ. ಶಿವರಾತ್ರಿಗೆ ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಕೆ.ಎಸ್.ಆರ್.ಟಿ.ಸಿ. ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…