Advertisement
ಸುದ್ದಿಗಳು

ಶಿವಂ ಶಿವೋಹಂ | ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಸಾಗಿಬರುತ್ತಿರುವ ಪಾದಯಾತ್ರಿಗಳು | ಭಕ್ತಾದಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ |

Share

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ನಡೆಯುವ ಶಿವರಾತ್ರಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಮೊದಲಾದ ಊರುಗಳಿಂದ ಪ್ರತಿ ವರ್ಷದಂತೆ ವಿವಿಧ ಪಾದಯಾತ್ರಿಗಳ ಸಂಘಟನೆಗಳ ಮೂಲಕ ಭಕ್ತಾದಿಗಳು ಶಿವನಾಮ ಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಆಗಮಿಸುತ್ತಿದ್ದಾರೆ. ಸುಮಾರು ಐವತ್ತು ಸಾವಿರ ಮಂದಿ ಪಾದಯಾತ್ರಿಗಳು ಈಗಾಗಲೆ ಧರ್ಮಸ್ಥಳಕ್ಕೆ ಬರುವುದಾಗಿ ಹೆಸರು ನೋಂದಾಯಿಸಿದ್ದಾರೆ.

ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಂಗಣ, ಅನ್ನಪೂರ್ಣ ಛತ್ರದ ಹಿಂಭಾಗ, ಗಂಗೋತ್ರಿ, ಸಾಕೇತ ವಸತಿಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಸ್ವಾಗತ ಕಾರ್ಯಾಲಯ ಹಾಗೂ ಮಾಹಿತಿ ಕಾರ್ಯಾಲಯ ತೆರೆದಿದ್ದು ಪಾದಯಾತ್ರಿಗಳ ಸ್ವಾಗತ ಮತ್ತು ಆತಿಥ್ಯಕ್ಕೆ ಸ್ವಯಂ ಸೇವಕರ ತಂಡ ಸಜ್ಜಾಗಿದೆ.

ಎಸ್.ಡಿ.ಎಂ. ಆಸ್ಪತ್ರೆಯ ಆಶ್ರಯದಲ್ಲಿ15 ಮಂದಿ ವೈದ್ಯರ ತಂಡ ಪಾದಯಾತ್ರಿಗಳ ಉಚಿತ ಸೇವೆಗೆ ಸಿದ್ದರಾಗಿದ್ದಾರೆ.
ಶಿವರಾತ್ರಿ ಜಾಗರಣೆ, ಉಪವಾಸ: ಶನಿವಾರ ಸಂಜೆ ಆರು ಗಂಟೆಗೆ ಧರ್ಮಸ್ಥಳದಲ್ಲಿ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡುವರು. ಅವರ ಪ್ರವಚನದ ಬಳಿಕ ಇಡೀ ರಾತ್ರಿ ಭಕ್ತರು ಶಿವನಾಮ ಸ್ಮರಣೆ, ಭಜನೆ, ಪ್ರಾರ್ಥನೆ, ಧ್ಯಾನದೊಂದಿಗೆ ಜಾಗರಣೆ ಮಾಡುವರು.

ದೇವಸ್ಥಾನದಲ್ಲಿ ಸಂಜೆ ಆರು ಗಂಟೆಯಿಂದ ನಾಲ್ಕು ಜಾವಗಳಲ್ಲಿ ಅಹೋರಾತ್ರಿ ಭಕ್ತರು ಶತರುದ್ರಾಭಿಷೇಕ, ಎಳನೀರು ಅಭಿಷೇಕ ಮಾಡಿ ಧನ್ಯತೆಯನ್ನು ಹೊಂದುವರು. ರಾತ್ರಿ ಇಡೀ ದೇವರ ದರ್ಶನಕ್ಕೆ ಅವಕಾಶವಿದ್ದು ಭಾನುವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯುತ್ತದೆ.  ಶಿವರಾತ್ರಿಗೆ ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಕೆ.ಎಸ್.ಆರ್.ಟಿ.ಸಿ. ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

2 minutes ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

4 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

12 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

14 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

15 hours ago