Advertisement
ಸುದ್ದಿಗಳು

#ಶಿವರಾತ್ರಿ | ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಶಿವಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ ಆರಂಭ |

Share

ಶ್ರೀಕ್ಷೇತ್ರ  ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭ ಶಿವಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು. 

ಬಳಿಕ ಶುಭಹಾರೈಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು,” ಧರ್ಮದ ಮರ್ಮವನ್ನರಿತು ನಮ್ಮನ್ನು ನಾವು ಶುದ್ದೀಕರಿಸಿ ಜಾಗೃತಿಗಾಗಿ ಜಾಗರಣೆ ಮಾಡಬೇಕು. ಸಂಸಾರದ ಕಷ್ಟಗಳನ್ನು ಪಾರುಮಾಡಲು ಧರ್ಮದ ಅನುಷ್ಠಾನದೊಂದಿಗೆ ದೇವರ ಅನುಗ್ರಹವೂ ಅಗತ್ಯ ಬೇಕಾಗಿದೆ ಎಂದು ಹೇಳಿದರು. ನಮ್ಮೆಲ್ಲರ ಸುಖ-ಶಾಂತಿ, ನೆಮ್ಮದಿಯೊಂದಿಗೆ ವಿಶ್ವಶಾಂತಿಗಾಗಿ ನಾವು ಪಾರ್ಥನೆ ಮಾಡಬೇಕಾದ ಅನಿವಾರ್ಯತೆ ಹಾಗೂ ಸಂಕ್ರಮಣಕಾಲದಲ್ಲಿ ನಾವು ಈಗ ಇದ್ದೇವೆ. ಧರ್ಮದ ಬಗ್ಗೆ ತಿಳಿವಳಿಕೆ ಇದ್ದುಆಚರಣೆ ಮಾಡಿದರೆಅದು ಹೆಚ್ಚು ಫಲಪ್ರದವಾಗುತ್ತದೆ.ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಪಾಲನೆಯೊಂದಿಗೆ ಎಲ್ಲರೂ ಸಚ್ಚಾರಿತ್ರ್ಯದ ಸುಜ್ಞಾನಿ ಭಕ್ಷರಾಗಬೇಕು.ಹಿತ-ಮಿತಆಹಾರ ಸೇವನೆಯೊಂದಿಗೆ ಶಿಸ್ತು, ಸಂಯಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಹೇಳಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಜಾಗರಣೆಯೊಂದಿಗೆ ಅಂತರಂಗ ಹಾಗೂ ಬಹಿರಂಗದಲ್ಲಿ ಭಕ್ತರು ಪರಿಶುದ್ಧರಾಗಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು.ಭಾವಶುದ್ಧಿ, ಕರ್ಮಶುದ್ಧಿ ಮತ್ತು ಮನಶುದ್ಧಿಯೊಂದಿಗೆ ಸಾರ್ಥಕಜೀವನ ನಡೆಸಬೇಕುಎಂದು ಹೇಳಿದರು.

ಪಾದಯಾತ್ರೆಯ ರೂವಾರಿ ಬೆಂಗಳೂರಿನ ಹನುಮಂತಪ್ಪಗುರೂಜಿ ಮತ್ತು ಮರಿಯಪ್ಪಗೌಡ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

5 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago