ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭ ಶಿವಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಶುಭಹಾರೈಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು,” ಧರ್ಮದ ಮರ್ಮವನ್ನರಿತು ನಮ್ಮನ್ನು ನಾವು ಶುದ್ದೀಕರಿಸಿ ಜಾಗೃತಿಗಾಗಿ ಜಾಗರಣೆ ಮಾಡಬೇಕು. ಸಂಸಾರದ ಕಷ್ಟಗಳನ್ನು ಪಾರುಮಾಡಲು ಧರ್ಮದ ಅನುಷ್ಠಾನದೊಂದಿಗೆ ದೇವರ ಅನುಗ್ರಹವೂ ಅಗತ್ಯ ಬೇಕಾಗಿದೆ ಎಂದು ಹೇಳಿದರು. ನಮ್ಮೆಲ್ಲರ ಸುಖ-ಶಾಂತಿ, ನೆಮ್ಮದಿಯೊಂದಿಗೆ ವಿಶ್ವಶಾಂತಿಗಾಗಿ ನಾವು ಪಾರ್ಥನೆ ಮಾಡಬೇಕಾದ ಅನಿವಾರ್ಯತೆ ಹಾಗೂ ಸಂಕ್ರಮಣಕಾಲದಲ್ಲಿ ನಾವು ಈಗ ಇದ್ದೇವೆ. ಧರ್ಮದ ಬಗ್ಗೆ ತಿಳಿವಳಿಕೆ ಇದ್ದುಆಚರಣೆ ಮಾಡಿದರೆಅದು ಹೆಚ್ಚು ಫಲಪ್ರದವಾಗುತ್ತದೆ.ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಪಾಲನೆಯೊಂದಿಗೆ ಎಲ್ಲರೂ ಸಚ್ಚಾರಿತ್ರ್ಯದ ಸುಜ್ಞಾನಿ ಭಕ್ಷರಾಗಬೇಕು.ಹಿತ-ಮಿತಆಹಾರ ಸೇವನೆಯೊಂದಿಗೆ ಶಿಸ್ತು, ಸಂಯಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಹೇಳಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಜಾಗರಣೆಯೊಂದಿಗೆ ಅಂತರಂಗ ಹಾಗೂ ಬಹಿರಂಗದಲ್ಲಿ ಭಕ್ತರು ಪರಿಶುದ್ಧರಾಗಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು.ಭಾವಶುದ್ಧಿ, ಕರ್ಮಶುದ್ಧಿ ಮತ್ತು ಮನಶುದ್ಧಿಯೊಂದಿಗೆ ಸಾರ್ಥಕಜೀವನ ನಡೆಸಬೇಕುಎಂದು ಹೇಳಿದರು.
ಪಾದಯಾತ್ರೆಯ ರೂವಾರಿ ಬೆಂಗಳೂರಿನ ಹನುಮಂತಪ್ಪಗುರೂಜಿ ಮತ್ತು ಮರಿಯಪ್ಪಗೌಡ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…