ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭ ಶಿವಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಶುಭಹಾರೈಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು,” ಧರ್ಮದ ಮರ್ಮವನ್ನರಿತು ನಮ್ಮನ್ನು ನಾವು ಶುದ್ದೀಕರಿಸಿ ಜಾಗೃತಿಗಾಗಿ ಜಾಗರಣೆ ಮಾಡಬೇಕು. ಸಂಸಾರದ ಕಷ್ಟಗಳನ್ನು ಪಾರುಮಾಡಲು ಧರ್ಮದ ಅನುಷ್ಠಾನದೊಂದಿಗೆ ದೇವರ ಅನುಗ್ರಹವೂ ಅಗತ್ಯ ಬೇಕಾಗಿದೆ ಎಂದು ಹೇಳಿದರು. ನಮ್ಮೆಲ್ಲರ ಸುಖ-ಶಾಂತಿ, ನೆಮ್ಮದಿಯೊಂದಿಗೆ ವಿಶ್ವಶಾಂತಿಗಾಗಿ ನಾವು ಪಾರ್ಥನೆ ಮಾಡಬೇಕಾದ ಅನಿವಾರ್ಯತೆ ಹಾಗೂ ಸಂಕ್ರಮಣಕಾಲದಲ್ಲಿ ನಾವು ಈಗ ಇದ್ದೇವೆ. ಧರ್ಮದ ಬಗ್ಗೆ ತಿಳಿವಳಿಕೆ ಇದ್ದುಆಚರಣೆ ಮಾಡಿದರೆಅದು ಹೆಚ್ಚು ಫಲಪ್ರದವಾಗುತ್ತದೆ.ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಪಾಲನೆಯೊಂದಿಗೆ ಎಲ್ಲರೂ ಸಚ್ಚಾರಿತ್ರ್ಯದ ಸುಜ್ಞಾನಿ ಭಕ್ಷರಾಗಬೇಕು.ಹಿತ-ಮಿತಆಹಾರ ಸೇವನೆಯೊಂದಿಗೆ ಶಿಸ್ತು, ಸಂಯಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಹೇಳಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಜಾಗರಣೆಯೊಂದಿಗೆ ಅಂತರಂಗ ಹಾಗೂ ಬಹಿರಂಗದಲ್ಲಿ ಭಕ್ತರು ಪರಿಶುದ್ಧರಾಗಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು.ಭಾವಶುದ್ಧಿ, ಕರ್ಮಶುದ್ಧಿ ಮತ್ತು ಮನಶುದ್ಧಿಯೊಂದಿಗೆ ಸಾರ್ಥಕಜೀವನ ನಡೆಸಬೇಕುಎಂದು ಹೇಳಿದರು.
ಪಾದಯಾತ್ರೆಯ ರೂವಾರಿ ಬೆಂಗಳೂರಿನ ಹನುಮಂತಪ್ಪಗುರೂಜಿ ಮತ್ತು ಮರಿಯಪ್ಪಗೌಡ ಉಪಸ್ಥಿತರಿದ್ದರು.
ಚಂದನ್ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…
ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ…
ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…
Ayanshi K.H, 1st. Std, New Horizon School Bahrain ಅಯಂಶಿ ಕೆಚ್,…
ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490