ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭ ಶಿವಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಶುಭಹಾರೈಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು,” ಧರ್ಮದ ಮರ್ಮವನ್ನರಿತು ನಮ್ಮನ್ನು ನಾವು ಶುದ್ದೀಕರಿಸಿ ಜಾಗೃತಿಗಾಗಿ ಜಾಗರಣೆ ಮಾಡಬೇಕು. ಸಂಸಾರದ ಕಷ್ಟಗಳನ್ನು ಪಾರುಮಾಡಲು ಧರ್ಮದ ಅನುಷ್ಠಾನದೊಂದಿಗೆ ದೇವರ ಅನುಗ್ರಹವೂ ಅಗತ್ಯ ಬೇಕಾಗಿದೆ ಎಂದು ಹೇಳಿದರು. ನಮ್ಮೆಲ್ಲರ ಸುಖ-ಶಾಂತಿ, ನೆಮ್ಮದಿಯೊಂದಿಗೆ ವಿಶ್ವಶಾಂತಿಗಾಗಿ ನಾವು ಪಾರ್ಥನೆ ಮಾಡಬೇಕಾದ ಅನಿವಾರ್ಯತೆ ಹಾಗೂ ಸಂಕ್ರಮಣಕಾಲದಲ್ಲಿ ನಾವು ಈಗ ಇದ್ದೇವೆ. ಧರ್ಮದ ಬಗ್ಗೆ ತಿಳಿವಳಿಕೆ ಇದ್ದುಆಚರಣೆ ಮಾಡಿದರೆಅದು ಹೆಚ್ಚು ಫಲಪ್ರದವಾಗುತ್ತದೆ.ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಪಾಲನೆಯೊಂದಿಗೆ ಎಲ್ಲರೂ ಸಚ್ಚಾರಿತ್ರ್ಯದ ಸುಜ್ಞಾನಿ ಭಕ್ಷರಾಗಬೇಕು.ಹಿತ-ಮಿತಆಹಾರ ಸೇವನೆಯೊಂದಿಗೆ ಶಿಸ್ತು, ಸಂಯಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಹೇಳಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಜಾಗರಣೆಯೊಂದಿಗೆ ಅಂತರಂಗ ಹಾಗೂ ಬಹಿರಂಗದಲ್ಲಿ ಭಕ್ತರು ಪರಿಶುದ್ಧರಾಗಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು.ಭಾವಶುದ್ಧಿ, ಕರ್ಮಶುದ್ಧಿ ಮತ್ತು ಮನಶುದ್ಧಿಯೊಂದಿಗೆ ಸಾರ್ಥಕಜೀವನ ನಡೆಸಬೇಕುಎಂದು ಹೇಳಿದರು.
ಪಾದಯಾತ್ರೆಯ ರೂವಾರಿ ಬೆಂಗಳೂರಿನ ಹನುಮಂತಪ್ಪಗುರೂಜಿ ಮತ್ತು ಮರಿಯಪ್ಪಗೌಡ ಉಪಸ್ಥಿತರಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…