ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭ ಶಿವಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಶುಭಹಾರೈಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು,” ಧರ್ಮದ ಮರ್ಮವನ್ನರಿತು ನಮ್ಮನ್ನು ನಾವು ಶುದ್ದೀಕರಿಸಿ ಜಾಗೃತಿಗಾಗಿ ಜಾಗರಣೆ ಮಾಡಬೇಕು. ಸಂಸಾರದ ಕಷ್ಟಗಳನ್ನು ಪಾರುಮಾಡಲು ಧರ್ಮದ ಅನುಷ್ಠಾನದೊಂದಿಗೆ ದೇವರ ಅನುಗ್ರಹವೂ ಅಗತ್ಯ ಬೇಕಾಗಿದೆ ಎಂದು ಹೇಳಿದರು. ನಮ್ಮೆಲ್ಲರ ಸುಖ-ಶಾಂತಿ, ನೆಮ್ಮದಿಯೊಂದಿಗೆ ವಿಶ್ವಶಾಂತಿಗಾಗಿ ನಾವು ಪಾರ್ಥನೆ ಮಾಡಬೇಕಾದ ಅನಿವಾರ್ಯತೆ ಹಾಗೂ ಸಂಕ್ರಮಣಕಾಲದಲ್ಲಿ ನಾವು ಈಗ ಇದ್ದೇವೆ. ಧರ್ಮದ ಬಗ್ಗೆ ತಿಳಿವಳಿಕೆ ಇದ್ದುಆಚರಣೆ ಮಾಡಿದರೆಅದು ಹೆಚ್ಚು ಫಲಪ್ರದವಾಗುತ್ತದೆ.ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಪಾಲನೆಯೊಂದಿಗೆ ಎಲ್ಲರೂ ಸಚ್ಚಾರಿತ್ರ್ಯದ ಸುಜ್ಞಾನಿ ಭಕ್ಷರಾಗಬೇಕು.ಹಿತ-ಮಿತಆಹಾರ ಸೇವನೆಯೊಂದಿಗೆ ಶಿಸ್ತು, ಸಂಯಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಹೇಳಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಜಾಗರಣೆಯೊಂದಿಗೆ ಅಂತರಂಗ ಹಾಗೂ ಬಹಿರಂಗದಲ್ಲಿ ಭಕ್ತರು ಪರಿಶುದ್ಧರಾಗಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು.ಭಾವಶುದ್ಧಿ, ಕರ್ಮಶುದ್ಧಿ ಮತ್ತು ಮನಶುದ್ಧಿಯೊಂದಿಗೆ ಸಾರ್ಥಕಜೀವನ ನಡೆಸಬೇಕುಎಂದು ಹೇಳಿದರು.
ಪಾದಯಾತ್ರೆಯ ರೂವಾರಿ ಬೆಂಗಳೂರಿನ ಹನುಮಂತಪ್ಪಗುರೂಜಿ ಮತ್ತು ಮರಿಯಪ್ಪಗೌಡ ಉಪಸ್ಥಿತರಿದ್ದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…