ಮುಂಬರುವ ಮಾರ್ಚ್ 1 ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತಾದಿಗಳು ಶಿರಾಡಿ ಮತ್ತು ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಗಳಲ್ಲಿ ಪಾದಾಯಾತ್ರೆ ಕೈಗೊಳ್ಳುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಫೆ.27 ರಿಂದ ಮಾರ್ಚ್ 2ರ ವರೆಗೆ ಅರಣ್ಯ ಇಲಾಖೆಯಿಂದ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕಾಡಾನೆಗಳ ಸಮಸ್ಯೆಗಳು ಇರುವುದರಿಂದ ಎಲ್ಲರೂ ಜಾಗರೂಕರಾಗಿರಬೇಕು, ಈ ಭಾಗದಲ್ಲಿ ಸಂಚರಿಸುವಾಗ ಎಚ್ಚರಿಕೆಯಿಂದ ಹಾಗೂ ಗುಂಪು ಗುಂಪಾಗಿ ಸಂಚರಿಸಬೇಕು, ಅಗತ್ಯವಿದ್ದಲ್ಲಿ ರಸ್ತೆ ಬದಿಯಲ್ಲಿ ಹಾಕಿರುವ ಅರಣ್ಯ ಇಲಾಖೆಯ ಸ್ಟಾಲ್ಗಳಲ್ಲಿ ಸಿಬ್ಬಂದಿಗಳ ಅಥವಾ ಸ್ವಯಂಸೇವಕರ ನೆರವು ಪಡೆಯಬಹುದಾಗಿದೆ, ರಸ್ತೆ ಬದಿಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳ ಮಾಹಿತಿಯನ್ನು ತಿಳಿದುಕೊಳ್ಳಬೇಕು, ರಸ್ತೆ ಬದಿಗಳಲ್ಲಿ ನಿಯೋಜಿಸಲಾಗಿರುವ ಇಲಾಖೆಯ ಸ್ವಯಂ ಸೇವಕರು ಮತ್ತು ಅರಣ್ಯ ಸಿಬ್ಬಂದಿಗಳಿಗೆ ಸಹಕಾರ ನೀಡಬೇಕು ಹಾಗೂ ಯಾವುದೇ ರೀತಿಯ ಅವಘಡಗಳು ಸಂಭವಿಸಿದಂತೆ ಎಚ್ಚರ ವಹಿಸಬೇಕು, ರಸ್ತೆ ಬದಿಗಳಲ್ಲಿ ಘನತ್ಯಾಜ್ಯವನ್ನು ಎಸೆಯಬಾರದು, ಖಾಲಿಯಾದ ಪ್ಲಾಸ್ಟಿಕ್ ನೀರಿನ ಬಾಟಲಿಗಳು, ತಿಂಡಿಗಳ ಪೊಟ್ಟಣಗಳನ್ನು ಕಸದ ತೊಟ್ಟಿಗಳಲ್ಲಿಯೇ ಹಾಕಿ ಪರಿಸರ ಮಾಲಿನ್ಯವನ್ನು ಕಾಪಾಡಬೇಕು, ರಾತ್ರಿಯಲ್ಲಿ ರಸ್ತೆ ಬದಿಯಲ್ಲಿ ಬೆಂಕಿ ಮಾಡುವುದನ್ನು ತಪ್ಪಿಸಿ, ಕಾಡಿಗೆ ಬೆಂಕಿ ಹರಡುವುದನ್ನು ತಡೆಗಟ್ಟಲು ಸಹರಿಸಬೇಕು, ಕತ್ತಲಾದ ನಂತರ ರಾತ್ರಿ ವೇಳೆಯಲ್ಲಿ ಪಾದಯಾತ್ರೆಯನ್ನು ಮುಂದುವರಿಸದೇ ಇರುವುದು ಸೂಕ್ತ, ಸ್ಟಾಲ್ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿದ್ದು, ಅದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…