Advertisement
ಸುದ್ದಿಗಳು

ಮಹಾಶಿವರಾತ್ರಿ ಪಾದಯಾತ್ರೆ | ಶಿರಾಡಿ ಮತ್ತು ಚಾರ್ಮಾಡಿ ಘಾಟಿಯಲ್ಲಿ ಮುನ್ನೆಚ್ಚರಿಕೆ | ಭಕ್ತಾದಿಗಳು ಜಾಗೃತೆ ವಹಿಸಲು ಅರಣ್ಯ ಇಲಾಖೆಯ ಕರೆ |

Share

ಮುಂಬರುವ ಮಾರ್ಚ್ 1 ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತಾದಿಗಳು ಶಿರಾಡಿ ಮತ್ತು ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಗಳಲ್ಲಿ ಪಾದಾಯಾತ್ರೆ ಕೈಗೊಳ್ಳುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಫೆ.27 ರಿಂದ ಮಾರ್ಚ್ 2ರ ವರೆಗೆ ಅರಣ್ಯ ಇಲಾಖೆಯಿಂದ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾಡಾನೆಗಳ ಸಮಸ್ಯೆಗಳು ಇರುವುದರಿಂದ ಎಲ್ಲರೂ ಜಾಗರೂಕರಾಗಿರಬೇಕು, ಈ ಭಾಗದಲ್ಲಿ ಸಂಚರಿಸುವಾಗ ಎಚ್ಚರಿಕೆಯಿಂದ ಹಾಗೂ ಗುಂಪು ಗುಂಪಾಗಿ ಸಂಚರಿಸಬೇಕು, ಅಗತ್ಯವಿದ್ದಲ್ಲಿ ರಸ್ತೆ ಬದಿಯಲ್ಲಿ ಹಾಕಿರುವ ಅರಣ್ಯ ಇಲಾಖೆಯ ಸ್ಟಾಲ್‍ಗಳಲ್ಲಿ ಸಿಬ್ಬಂದಿಗಳ ಅಥವಾ ಸ್ವಯಂಸೇವಕರ ನೆರವು ಪಡೆಯಬಹುದಾಗಿದೆ, ರಸ್ತೆ ಬದಿಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳ ಮಾಹಿತಿಯನ್ನು ತಿಳಿದುಕೊಳ್ಳಬೇಕು, ರಸ್ತೆ ಬದಿಗಳಲ್ಲಿ ನಿಯೋಜಿಸಲಾಗಿರುವ ಇಲಾಖೆಯ ಸ್ವಯಂ ಸೇವಕರು ಮತ್ತು ಅರಣ್ಯ ಸಿಬ್ಬಂದಿಗಳಿಗೆ ಸಹಕಾರ ನೀಡಬೇಕು ಹಾಗೂ ಯಾವುದೇ ರೀತಿಯ ಅವಘಡಗಳು ಸಂಭವಿಸಿದಂತೆ ಎಚ್ಚರ ವಹಿಸಬೇಕು, ರಸ್ತೆ ಬದಿಗಳಲ್ಲಿ ಘನತ್ಯಾಜ್ಯವನ್ನು ಎಸೆಯಬಾರದು, ಖಾಲಿಯಾದ ಪ್ಲಾಸ್ಟಿಕ್ ನೀರಿನ ಬಾಟಲಿಗಳು, ತಿಂಡಿಗಳ ಪೊಟ್ಟಣಗಳನ್ನು ಕಸದ ತೊಟ್ಟಿಗಳಲ್ಲಿಯೇ ಹಾಕಿ ಪರಿಸರ ಮಾಲಿನ್ಯವನ್ನು ಕಾಪಾಡಬೇಕು, ರಾತ್ರಿಯಲ್ಲಿ ರಸ್ತೆ ಬದಿಯಲ್ಲಿ ಬೆಂಕಿ ಮಾಡುವುದನ್ನು ತಪ್ಪಿಸಿ, ಕಾಡಿಗೆ ಬೆಂಕಿ ಹರಡುವುದನ್ನು ತಡೆಗಟ್ಟಲು ಸಹರಿಸಬೇಕು, ಕತ್ತಲಾದ ನಂತರ ರಾತ್ರಿ ವೇಳೆಯಲ್ಲಿ ಪಾದಯಾತ್ರೆಯನ್ನು ಮುಂದುವರಿಸದೇ ಇರುವುದು ಸೂಕ್ತ, ಸ್ಟಾಲ್‍ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿದ್ದು, ಅದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

10 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

14 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

22 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

22 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

24 hours ago