ಲೋಕ ಕಲ್ಯಾಣಾರ್ಥವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಅತ್ಯಪರೂಪದ ಸೋಮ ಸಪರ್ಯಾ ಪೂಜೆಯು ಸೋಮವಾರ ಸಂಜೆ ಪ್ರದೋಷ ಕಾಲದಲ್ಲಿ ನಡೆಯಿತು. 2500 ಕ್ಕೂ ಅಧಿಕ ರುದ್ರಪಾಠಕರಿಂದ ಏಕಕಂಠದಲ್ಲಿ ಶ್ರೀರುದ್ರಪಠಣ ನಡೆಯುತ್ತಿರಬೇಕಾದರೆ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಶ್ರೀ ಚಂದ್ರಮೌಳೀಶ್ವರ ದೇವರಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.
ಮೂರು ವರ್ಷಗಳಿಂದ ವಿಶ್ವದ ಎಲ್ಲೆಡೆಯ ಆತಂಕದ ಸ್ಥಿತಿಗೆ ಜನರಿಗೆ ನೆಮ್ಮದಿಯ ಜೀವನ ಬೇಕಿದೆ. ಎಲ್ಲ ಆತಂಕಗಳು ದೂರವಾಗಿ ನೆಮ್ಮದಿ ದೊರೆಯಲೆಂಬ ಸದಾಶಯದೊಂದಿಗೆ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಶರಾವತಿ ತೀರದಲ್ಲಿರುವ ಶ್ರೀ ಚಂದ್ರಮೌಳೀಶ್ವರನಿಗೆ ಶ್ರೀ ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ವಿಶೇಷ ಪೂಜೆ ನಡೆಸಿದರು. ಗಂಗಾಜಲ ಹಾಗೂ ವಿವಿಧ ದ್ರವ್ಯಗಳ ಅಭಿಷೇಕ, ರಜತ ಮತ್ತು ಸುವರ್ಣ ಪುಷ್ಪಗಳ ಅಭಿಷೇಕ ನಡೆಸಿದರು. ಪ್ರದೋಷ ಕಾಲದಲ್ಲಿ ನಡೆಯುವ ಈ ಪೂಜೆಗೆ ಸೋಮ ಸಪರ್ಯಾ ಎಂದು ಹೇಳಲಾಗುತ್ತದೆ.
ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಆರ್.ಎಸ್.ಎಸ್ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್, ಹೊರನಾಡು ದೇವಾಲಯದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ, ಶಾಸಕರಾದ ಹರತಾಳು ಹಾಲಪ್ಪ, ಕುಂದಾಪುರದ ಶಾಸಕರಾದ ಸುಕುಮಾರ ಶೆಟ್ಟಿ, ಆರ್ ಎಸ್ ಎಸ್ ಪ್ರಮುಖರಾದ ಪ್ರಕಾಶ್ ಮೊದಲಾದವರು ಭಾಗವಹಿಸಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…