Advertisement
ಸುದ್ದಿಗಳು

#ಶಿವರಾತ್ರಿ | ಹೊಸನಗರದಲ್ಲಿ ನಡೆದ ಅಪರೂಪದ ಸೋಮ ಸಪರ್ಯಾ | 2500 ಕ್ಕೂ ಅಧಿಕ ಮಂದಿಯಿಂದ ರುದ್ರ ಪಠಣ | ಶ್ರೀ ಚಂದ್ರಮೌಳೀಶ್ವರನಿಗೆ ರಾಘವೇಶ್ವರ ಶ್ರೀಗಳಿಂದ ವಿಶೇಷ ಪೂಜೆ |

Share

ಲೋಕ ಕಲ್ಯಾಣಾರ್ಥವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಅತ್ಯಪರೂಪದ ಸೋಮ ಸಪರ್ಯಾ ಪೂಜೆಯು ಸೋಮವಾರ ಸಂಜೆ ಪ್ರದೋಷ ಕಾಲದಲ್ಲಿ ನಡೆಯಿತು. 2500 ಕ್ಕೂ ಅಧಿಕ ರುದ್ರಪಾಠಕರಿಂದ ಏಕಕಂಠದಲ್ಲಿ ಶ್ರೀರುದ್ರಪಠಣ ನಡೆಯುತ್ತಿರಬೇಕಾದರೆ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಶ್ರೀ ಚಂದ್ರಮೌಳೀಶ್ವರ ದೇವರಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.

ಮೂರು ವರ್ಷಗಳಿಂದ ವಿಶ್ವದ ಎಲ್ಲೆಡೆಯ ಆತಂಕದ ಸ್ಥಿತಿಗೆ ಜನರಿಗೆ ನೆಮ್ಮದಿಯ ಜೀವನ ಬೇಕಿದೆ. ಎಲ್ಲ ಆತಂಕಗಳು ದೂರವಾಗಿ ನೆಮ್ಮದಿ ದೊರೆಯಲೆಂಬ ಸದಾಶಯದೊಂದಿಗೆ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಶರಾವತಿ ತೀರದಲ್ಲಿರುವ ಶ್ರೀ ಚಂದ್ರಮೌಳೀಶ್ವರನಿಗೆ ಶ್ರೀ ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ವಿಶೇಷ ಪೂಜೆ ನಡೆಸಿದರು. ಗಂಗಾಜಲ ಹಾಗೂ ವಿವಿಧ ದ್ರವ್ಯಗಳ ಅಭಿಷೇಕ, ರಜತ ಮತ್ತು ಸುವರ್ಣ ಪುಷ್ಪಗಳ ಅಭಿಷೇಕ ನಡೆಸಿದರು. ಪ್ರದೋಷ ಕಾಲದಲ್ಲಿ ನಡೆಯುವ ಈ ಪೂಜೆಗೆ ಸೋಮ ಸಪರ್ಯಾ ಎಂದು ಹೇಳಲಾಗುತ್ತದೆ.

ಕಾರ್ಯಕ್ರಮದಲ್ಲಿ  ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಆರ್.ಎಸ್.ಎಸ್ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್, ಹೊರನಾಡು ದೇವಾಲಯದ ಧರ್ಮದರ್ಶಿಗಳಾದ  ಭೀಮೇಶ್ವರ ಜೋಶಿ,  ಶಾಸಕರಾದ  ಹರತಾಳು ಹಾಲಪ್ಪ, ಕುಂದಾಪುರದ ಶಾಸಕರಾದ  ಸುಕುಮಾರ ಶೆಟ್ಟಿ, ಆರ್‌ ಎಸ್‌ ಎಸ್‌ ಪ್ರಮುಖರಾದ ಪ್ರಕಾಶ್‌ ಮೊದಲಾದವರು ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

17 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

24 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

24 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

24 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

24 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

24 hours ago