ಲೋಕ ಕಲ್ಯಾಣಾರ್ಥವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಅತ್ಯಪರೂಪದ ಸೋಮ ಸಪರ್ಯಾ ಪೂಜೆಯು ಸೋಮವಾರ ಸಂಜೆ ಪ್ರದೋಷ ಕಾಲದಲ್ಲಿ ನಡೆಯಿತು. 2500 ಕ್ಕೂ ಅಧಿಕ ರುದ್ರಪಾಠಕರಿಂದ ಏಕಕಂಠದಲ್ಲಿ ಶ್ರೀರುದ್ರಪಠಣ ನಡೆಯುತ್ತಿರಬೇಕಾದರೆ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಶ್ರೀ ಚಂದ್ರಮೌಳೀಶ್ವರ ದೇವರಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.
ಮೂರು ವರ್ಷಗಳಿಂದ ವಿಶ್ವದ ಎಲ್ಲೆಡೆಯ ಆತಂಕದ ಸ್ಥಿತಿಗೆ ಜನರಿಗೆ ನೆಮ್ಮದಿಯ ಜೀವನ ಬೇಕಿದೆ. ಎಲ್ಲ ಆತಂಕಗಳು ದೂರವಾಗಿ ನೆಮ್ಮದಿ ದೊರೆಯಲೆಂಬ ಸದಾಶಯದೊಂದಿಗೆ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಶರಾವತಿ ತೀರದಲ್ಲಿರುವ ಶ್ರೀ ಚಂದ್ರಮೌಳೀಶ್ವರನಿಗೆ ಶ್ರೀ ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ವಿಶೇಷ ಪೂಜೆ ನಡೆಸಿದರು. ಗಂಗಾಜಲ ಹಾಗೂ ವಿವಿಧ ದ್ರವ್ಯಗಳ ಅಭಿಷೇಕ, ರಜತ ಮತ್ತು ಸುವರ್ಣ ಪುಷ್ಪಗಳ ಅಭಿಷೇಕ ನಡೆಸಿದರು. ಪ್ರದೋಷ ಕಾಲದಲ್ಲಿ ನಡೆಯುವ ಈ ಪೂಜೆಗೆ ಸೋಮ ಸಪರ್ಯಾ ಎಂದು ಹೇಳಲಾಗುತ್ತದೆ.
ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಆರ್.ಎಸ್.ಎಸ್ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್, ಹೊರನಾಡು ದೇವಾಲಯದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ, ಶಾಸಕರಾದ ಹರತಾಳು ಹಾಲಪ್ಪ, ಕುಂದಾಪುರದ ಶಾಸಕರಾದ ಸುಕುಮಾರ ಶೆಟ್ಟಿ, ಆರ್ ಎಸ್ ಎಸ್ ಪ್ರಮುಖರಾದ ಪ್ರಕಾಶ್ ಮೊದಲಾದವರು ಭಾಗವಹಿಸಿದ್ದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…