Advertisement
MIRROR FOCUS

ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯಲ್ಲಿ ಭಾರತ ದಾಖಲೆ ಪ್ರಗತಿ | ಆಹಾರಧಾನ್ಯ ಉತ್ಪಾದನೆ 357.73 ಮಿಲಿಯನ್ ಟನ್

Share

ದೇಶದ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಲ್ಲಿ ಭಾರತ ಅಪೂರ್ವ ಪ್ರಗತಿ ಸಾಧಿಸಿದೆ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

ಆರ್ಥಿಕ ಸಮೀಕ್ಷೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸಮೀಕ್ಷೆಯ ಅಂಕಿಅಂಶಗಳು ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಭಾರತ ಇತ್ತೀಚಿನ ವರ್ಷಗಳಲ್ಲಿ ದಾಖಲೆಯ ಬೆಳವಣಿಗೆ ಕಂಡಿದೆ ಎಂಬುದನ್ನು ಸ್ಪಷ್ಟಪಡಿಸುತ್ತವೆ ಎಂದರು. ಕಳೆದ ಐದು ವರ್ಷಗಳ ಅವಧಿಯಲ್ಲಿ ಕೃಷಿ ಮತ್ತು ಸಹಾಯಕ ವಲಯಗಳು ಸ್ಥಿರ ಬೆಲೆಯಲ್ಲಿ ಸರಾಸರಿ ವಾರ್ಷಿಕ 4.4 ಶೇಕಡಾ ಬೆಳವಣಿಗೆ ದಾಖಲಿಸಿವೆ. ಇದು ಜಾಗತಿಕ ಸರಾಸರಿಗಿಂತ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು. 2024-25 ಆರ್ಥಿಕ ವರ್ಷದಲ್ಲಿ ದೇಶದ ಆಹಾರಧಾನ್ಯ ಉತ್ಪಾದನೆ 357.73 ಮಿಲಿಯನ್ ಟನ್ ಎಂಬ ದಾಖಲೆಯ ಮಟ್ಟ ತಲುಪಿದೆ ಎಂದು ಚೌಹಾನ್ ಹೇಳಿದರು. ಈ ಬೆಳವಣಿಗೆಗೆ ಮುಖ್ಯ ಕಾರಣಗಳು ಅಕ್ಕಿ, ಗೋಧಿ, ಜೋಳ, ಸಣ್ಣ ಧಾನ್ಯಗಳು ‘ಶ್ರೀ ಅಣ್ಣ’ ಎಂದೇ ಕರೆಸಿಕೊಳ್ಳುವ ಸಿರಿಧಾನ್ಯಗಳು ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದು ಸಹಾಯ ಮಾಡಿದೆ ಎಂದು ಅವರು ವಿವರಿಸಿದರು.

ಭಾರತ ಇಂದು ಕೇವಲ ಆಹಾರಧಾನ್ಯದಲ್ಲಿ ಸ್ವಾವಲಂಬಿಯಾಗಿರುವುದಲ್ಲದೆ, ಅನೇಕ ಬೆಳೆಗಳಲ್ಲಿ ಜಾಗತಿಕ ಮಟ್ಟದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಚಿವರು ಹೇಳಿದರು. ಭಾರತದ ಕೃಷಿಯಲ್ಲಿ ತೋಟಗಾರಿಕೆ ವಲಯವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ಷೇತ್ರವಾಗಿದೆ ಎಂದು ಅವರು ಒತ್ತಿ ಹೇಳಿದರು. 11 ವರ್ಷಗಳಲ್ಲಿ ತೋಟಗಾರಿಕೆ ಉತ್ಪಾದನೆ ಭಾರೀ ಏರಿಕೆ ಕಂಡಿದ್ದು, ಕಳೆದ 11 ವರ್ಷಗಳಲ್ಲಿ ದೇಶದ ತೋಟಗಾರಿಕೆ ಉತ್ಪಾದನೆ 280.70 ಮಿಲಿಯನ್ ಟನ್‌ನಿಂದ 367.72 ಮಿಲಿಯನ್ ಟನ್‌ಗೆ  ಏರಿಕೆಯಾಗಿದೆ ಎಂದು ಚೌಹಾನ್ ಮಾಹಿತಿ ನೀಡಿದರು.

ಆರ್ಥಿಕ ಸಮೀಕ್ಷೆಯ ಅಂಕಿಅಂಶಗಳು ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯಲ್ಲಿ ಭಾರತ ನಿರಂತರವಾಗಿ ದಾಖಲೆಯ ಸಾಧನೆ ಮಾಡುತ್ತಿದೆ ಎಂಬುದನ್ನು ತೋರಿಸುತ್ತವೆ. ಆಹಾರಧಾನ್ಯ ಉತ್ಪಾದನೆ ಮತ್ತು ತೋಟಗಾರಿಕೆ ಕ್ಷೇತ್ರದ ವೇಗದ ಬೆಳವಣಿಗೆ ದೇಶದ ಕೃಷಿ ಶಕ್ತಿಯನ್ನು ಮತ್ತಷ್ಟು ಬಲಪಡಿಸುತ್ತಿದೆ  ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

8 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

9 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago