Advertisement
ಸುದ್ದಿಗಳು

ಶಂಭೋ ಶಂಕರನನ್ನು ನೆನೆದು, ಪುನೀತರಾಗುವ ದಿನ ಶಿವರಾತ್ರಿ | ಕೈಲಾಸನಾಥನಿಗಾಗಿ ಪೂಜೆ, ವ್ರತ, ಜಾಗರಣೆ

Share

ಮಹಾಶಿವರಾತ್ರಿ(Shivaratri) ಭಾರತದ್ಯಾಂತ(India) ಆಚರಿಸಲ್ಪಡುವ ವಿಶೇಷ ವ್ರತ. ಮಹಾಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲ ಮಾಘಮಾಸದ ಕೃಷ್ಣ ಪಕ್ಷ ಚತುರ್ದಶಿ, ಅಂದು ದೇವಲೋಕದಲ್ಲಿ (ಅಲ್ಲಿಯ ಕಾಲ ಗಣನೆಗೆ ಅನುಸಾರವಾಗಿ ಪ್ರತಿದಿನ ಶಿವನು ರಾತ್ರಿಯ ಒಂದು ಪ್ರಹಾರ ವಿಶ್ರಾಂತಿಯನ್ನು ಪಡೆಯುವಾಗ ಅದು ಪೃಥ್ವಿಯ ಮೇಲೆ ವರ್ಷಕ್ಕೊಂದು ಸಲ ಮಹಾಶಿವರಾತ್ರಿ ಎಂದು ಆಚರಿಸಲಾಗುತ್ತದೆ,) ಆ ಮಹಾ ಶಿವರಾತ್ರಿಯು, ಮಾ.8 ರಂದು   ರಾತ್ರಿ12:06 ರಿಂದ 12:58 ರವರೆಗೆ ನಡುರಾತ್ರಿ ಬರುತ್ತದೆ.

ಇಂತಹ ಕಾಲದಲ್ಲಿ ಶಿವ ತತ್ಪದ ಕಾರ್ಯ ನಿಂತು ಹೋಗುತ್ತದೆ. ಅಂದರೆ ಆ ಸಮಯದಲ್ಲಿ ಶಿವನು ಧ್ಯಾನಾವಸ್ಥೆಯಿಂದ ಸಮಾಧಿ ಅವಸ್ಥೆಗೆ ಹೋಗುತ್ತಾನೆ. ಶಿವನ ಸಮಾಧಿ ಸ್ಥಿತಿ ಅಂದರೆ ಶಿವನು ತನಗಾಗಿ ಸಾಧನೆ ಮಾಡುವ ಕಾಲ ಈ ಸಮಯದಲ್ಲಿ ತಿಳಿದು ಅಥವಾ ತಿಳಿಯದೋ ಶಿವ ಪೂಜೆ ಉಪಾಸನೆ ಮಾಡಿದ್ದಲ್ಲಿ ನಮ್ಮ ಜೀವನದ ಎಲ್ಲಾ ಕುಂದು ಕೊರತೆ ಇದ್ದರೂ ಸಹ ಶೇಕಡ 100 % ಪರಿಹಾರವಾಗಿ ಶುಭಫಲ ದೊರೆಯುತ್ತದೆ. ಕಾರಣ ಈ ಕಾಲಾವಧಿಯಲ್ಲಿ ವಿಶ್ವದ ತಮೋ ಗುಣವನ್ನು ಶಿವ ತತ್ವ ಸ್ವೀಕರಿಸುವುದಿಲ್ಲ. ಆದ್ದರಿಂದ ವಿಶ್ವದಲ್ಲಿ ತಮೋ ಗುಣ ಬಹಳ ಹೆಚ್ಚಾಗುತ್ತದೆ. ಅದರ ಪರಿಣಾಮ ನಮ್ಮ ಮೇಲಾಗಬಾರದೆಂದು ಮಹಾಶಿವರಾತ್ರಿಯ ವ್ರತವನ್ನು ಕೈಗೊಂಡು ನಾವು ಶಿವ ತತ್ವವನ್ನು ಆಕರ್ಷಿಸಬೇಕು.

ಮಹಾಶಿವರಾತ್ರಿ ವೃತಕ್ಕೆ, ಉಪವಾಸ, ಪೂಜೆ, ಜಾಗರಣೆ  ಮಾಡುವುದರಿಂದ ಹಾಗೂ ಅಂದು ಚತುರ್ದಶಿ ಎಂದು ಬೆಳಿಗ್ಗೆ ಮಹಾಶಿವರಾತ್ರಿಯ ವ್ರತವನ್ನು ಸಂಕಲ್ಪ ಮಾಡಿ ಸಾಯಂಕಾಲ ನದಿಯಲ್ಲಿ ಅಥವಾ ಕೆರೆಯಲ್ಲಿ ಶಾಸ್ತ್ರೋಕ್ತವಾಗಿ ಸ್ನಾನ ಮಾಡಬೇಕು. ಬಸ್ಮಾ ಮತ್ತು ರುದ್ರಾಕ್ಷಿಗಳನ್ನು ಧರಿಸಬೇಕು.ಪ್ರದೋಷ ಕಾಲದಲ್ಲಿ ಶಿವನ ದೇವಸ್ಥಾನಕ್ಕೆ ಹೋಗಿ ದೇವರ ಧ್ಯಾನವನ್ನು ಶಿವಪಂಚಾಕ್ಷರಿ ಮಂತ್ರದಿಂದ ಧ್ಯಾನ ಮಾಡುವುದರ ಮೂಲಕ, ಶಿವ ತ್ತತ್ವವನ್ನು ಆಕರ್ಷಿಸಬೇಕು.

ಅಂದಿನ ರಾತ್ರಿಯ ನಾಲ್ಕು ಪ್ರಹಾರಗಳಲ್ಲಿ ನಾಲ್ಕು ಪೂಜೆಗಳನ್ನು ಮಾಡಬೇಕೆಂದು ವಿಧಾನವಿದೆ. ಅದಕ್ಕೆ ಯಾಮ ಪೂಜೆ ಎನ್ನುತ್ತಾರೆ. ದೇವರಿಗೆ ಅಭಂಗ್ಯ ಸ್ನಾನ ಮಾಡಿಸಬೇಕು, ಅನು ಲೇಪನ ಮಾಡಿ ಮಾವಿನ ಹಾಗೂ ಬಿಲ್ವಪತ್ರೆಗಳನ್ನು ಅರ್ಪಿಸಬೇಕು. ಅಕ್ಕಿಯ ಹಿಟ್ಟಿನ 26 ದೀಪಗಳನ್ನು ಮಾಡಿ ಅವುಗಳನ್ನು ದೇವರಿಗೆ ಬೆಳಗಬೇಕು. ಈ ರೀತಿಯಾಗಿ ನಿರಂತರ ಸಂಪೂರ್ಣ ರಾತ್ರಿ ಮಾಡಿದ ನಂತರ ವ್ರತದ ಸಮಾಪ್ತಿಯನ್ನು ಮಾಡಬೇಕು.

ಅಂದಿನ ದಿನ, ದಿನವಿಡೀ ಶಿವನ ನಾಮ ಜಪ ಮಾಡಿ, ಸಾಧ್ಯವಾದರೆ ಶಿವಲಿಂಗಕ್ಕೆ ಅಭಿಷೇಕವನ್ನು ಮಾಡಿ, ಶಿವನಿಗೆ ಬಿಳಿ ಅಕ್ಷತೆ ಬಿಳಿ ಹೂವು ಬಿಲ್ವಪತ್ರೆಯನ್ನು ಅರ್ಪಿಸಿ ಶಿವನ ದೇವಸ್ಥಾನಕ್ಕೆ ಹೋಗಿ ಶಿವನ ದರ್ಶನವನ್ನು ಮಾಡಿ, ಸಂತೃಪ್ತಿಯಿಂದ ಭಕ್ತಿಯಿಂದ ಶಿವರಾತ್ರಿಯ ಆಚರಣೆ ಮಾಡಿ ಪುನೀತರಾಗಿ.

ಮೂಲ : ಡಿಜಿಟಲ್‌ ಮೀಡಿಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

36 minutes ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

4 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

6 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

9 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

14 hours ago