Advertisement
ಸುದ್ದಿಗಳು

ಶಂಭೋ ಶಂಕರನನ್ನು ನೆನೆದು, ಪುನೀತರಾಗುವ ದಿನ ಶಿವರಾತ್ರಿ | ಕೈಲಾಸನಾಥನಿಗಾಗಿ ಪೂಜೆ, ವ್ರತ, ಜಾಗರಣೆ

Share

ಮಹಾಶಿವರಾತ್ರಿ(Shivaratri) ಭಾರತದ್ಯಾಂತ(India) ಆಚರಿಸಲ್ಪಡುವ ವಿಶೇಷ ವ್ರತ. ಮಹಾಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲ ಮಾಘಮಾಸದ ಕೃಷ್ಣ ಪಕ್ಷ ಚತುರ್ದಶಿ, ಅಂದು ದೇವಲೋಕದಲ್ಲಿ (ಅಲ್ಲಿಯ ಕಾಲ ಗಣನೆಗೆ ಅನುಸಾರವಾಗಿ ಪ್ರತಿದಿನ ಶಿವನು ರಾತ್ರಿಯ ಒಂದು ಪ್ರಹಾರ ವಿಶ್ರಾಂತಿಯನ್ನು ಪಡೆಯುವಾಗ ಅದು ಪೃಥ್ವಿಯ ಮೇಲೆ ವರ್ಷಕ್ಕೊಂದು ಸಲ ಮಹಾಶಿವರಾತ್ರಿ ಎಂದು ಆಚರಿಸಲಾಗುತ್ತದೆ,) ಆ ಮಹಾ ಶಿವರಾತ್ರಿಯು, ಮಾ.8 ರಂದು   ರಾತ್ರಿ12:06 ರಿಂದ 12:58 ರವರೆಗೆ ನಡುರಾತ್ರಿ ಬರುತ್ತದೆ.

ಇಂತಹ ಕಾಲದಲ್ಲಿ ಶಿವ ತತ್ಪದ ಕಾರ್ಯ ನಿಂತು ಹೋಗುತ್ತದೆ. ಅಂದರೆ ಆ ಸಮಯದಲ್ಲಿ ಶಿವನು ಧ್ಯಾನಾವಸ್ಥೆಯಿಂದ ಸಮಾಧಿ ಅವಸ್ಥೆಗೆ ಹೋಗುತ್ತಾನೆ. ಶಿವನ ಸಮಾಧಿ ಸ್ಥಿತಿ ಅಂದರೆ ಶಿವನು ತನಗಾಗಿ ಸಾಧನೆ ಮಾಡುವ ಕಾಲ ಈ ಸಮಯದಲ್ಲಿ ತಿಳಿದು ಅಥವಾ ತಿಳಿಯದೋ ಶಿವ ಪೂಜೆ ಉಪಾಸನೆ ಮಾಡಿದ್ದಲ್ಲಿ ನಮ್ಮ ಜೀವನದ ಎಲ್ಲಾ ಕುಂದು ಕೊರತೆ ಇದ್ದರೂ ಸಹ ಶೇಕಡ 100 % ಪರಿಹಾರವಾಗಿ ಶುಭಫಲ ದೊರೆಯುತ್ತದೆ. ಕಾರಣ ಈ ಕಾಲಾವಧಿಯಲ್ಲಿ ವಿಶ್ವದ ತಮೋ ಗುಣವನ್ನು ಶಿವ ತತ್ವ ಸ್ವೀಕರಿಸುವುದಿಲ್ಲ. ಆದ್ದರಿಂದ ವಿಶ್ವದಲ್ಲಿ ತಮೋ ಗುಣ ಬಹಳ ಹೆಚ್ಚಾಗುತ್ತದೆ. ಅದರ ಪರಿಣಾಮ ನಮ್ಮ ಮೇಲಾಗಬಾರದೆಂದು ಮಹಾಶಿವರಾತ್ರಿಯ ವ್ರತವನ್ನು ಕೈಗೊಂಡು ನಾವು ಶಿವ ತತ್ವವನ್ನು ಆಕರ್ಷಿಸಬೇಕು.

ಮಹಾಶಿವರಾತ್ರಿ ವೃತಕ್ಕೆ, ಉಪವಾಸ, ಪೂಜೆ, ಜಾಗರಣೆ  ಮಾಡುವುದರಿಂದ ಹಾಗೂ ಅಂದು ಚತುರ್ದಶಿ ಎಂದು ಬೆಳಿಗ್ಗೆ ಮಹಾಶಿವರಾತ್ರಿಯ ವ್ರತವನ್ನು ಸಂಕಲ್ಪ ಮಾಡಿ ಸಾಯಂಕಾಲ ನದಿಯಲ್ಲಿ ಅಥವಾ ಕೆರೆಯಲ್ಲಿ ಶಾಸ್ತ್ರೋಕ್ತವಾಗಿ ಸ್ನಾನ ಮಾಡಬೇಕು. ಬಸ್ಮಾ ಮತ್ತು ರುದ್ರಾಕ್ಷಿಗಳನ್ನು ಧರಿಸಬೇಕು.ಪ್ರದೋಷ ಕಾಲದಲ್ಲಿ ಶಿವನ ದೇವಸ್ಥಾನಕ್ಕೆ ಹೋಗಿ ದೇವರ ಧ್ಯಾನವನ್ನು ಶಿವಪಂಚಾಕ್ಷರಿ ಮಂತ್ರದಿಂದ ಧ್ಯಾನ ಮಾಡುವುದರ ಮೂಲಕ, ಶಿವ ತ್ತತ್ವವನ್ನು ಆಕರ್ಷಿಸಬೇಕು.

ಅಂದಿನ ರಾತ್ರಿಯ ನಾಲ್ಕು ಪ್ರಹಾರಗಳಲ್ಲಿ ನಾಲ್ಕು ಪೂಜೆಗಳನ್ನು ಮಾಡಬೇಕೆಂದು ವಿಧಾನವಿದೆ. ಅದಕ್ಕೆ ಯಾಮ ಪೂಜೆ ಎನ್ನುತ್ತಾರೆ. ದೇವರಿಗೆ ಅಭಂಗ್ಯ ಸ್ನಾನ ಮಾಡಿಸಬೇಕು, ಅನು ಲೇಪನ ಮಾಡಿ ಮಾವಿನ ಹಾಗೂ ಬಿಲ್ವಪತ್ರೆಗಳನ್ನು ಅರ್ಪಿಸಬೇಕು. ಅಕ್ಕಿಯ ಹಿಟ್ಟಿನ 26 ದೀಪಗಳನ್ನು ಮಾಡಿ ಅವುಗಳನ್ನು ದೇವರಿಗೆ ಬೆಳಗಬೇಕು. ಈ ರೀತಿಯಾಗಿ ನಿರಂತರ ಸಂಪೂರ್ಣ ರಾತ್ರಿ ಮಾಡಿದ ನಂತರ ವ್ರತದ ಸಮಾಪ್ತಿಯನ್ನು ಮಾಡಬೇಕು.

ಅಂದಿನ ದಿನ, ದಿನವಿಡೀ ಶಿವನ ನಾಮ ಜಪ ಮಾಡಿ, ಸಾಧ್ಯವಾದರೆ ಶಿವಲಿಂಗಕ್ಕೆ ಅಭಿಷೇಕವನ್ನು ಮಾಡಿ, ಶಿವನಿಗೆ ಬಿಳಿ ಅಕ್ಷತೆ ಬಿಳಿ ಹೂವು ಬಿಲ್ವಪತ್ರೆಯನ್ನು ಅರ್ಪಿಸಿ ಶಿವನ ದೇವಸ್ಥಾನಕ್ಕೆ ಹೋಗಿ ಶಿವನ ದರ್ಶನವನ್ನು ಮಾಡಿ, ಸಂತೃಪ್ತಿಯಿಂದ ಭಕ್ತಿಯಿಂದ ಶಿವರಾತ್ರಿಯ ಆಚರಣೆ ಮಾಡಿ ಪುನೀತರಾಗಿ.

ಮೂಲ : ಡಿಜಿಟಲ್‌ ಮೀಡಿಯ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

14 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

20 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

20 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago