ಸುದ್ದಿಗಳು

ಕಾಂಗ್ರೆಸ್ ವಿರುದ್ಧ ಹಣ ಪಡೆದು ಟಿಕೆಟ್ ಕೊಟ್ಟ ಆರೋಪ ಮಾಡಿದ ಬಿಜೆಪಿ | ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಶೇಷಾದ್ರಿ ರಸ್ತೆ ಬಳಿ ಇರುವ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ದೂರು ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ಬಿ ಫಾರಂ ನೀಡುವ ಅಧಿಕೃತ ವ್ಯಕ್ತಿಯಾಗಿದ್ದಾರೆ. ಆದರೆ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಹಣ ಸಂಗ್ರಹಿಸಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಲಂಚ ಸ್ವೀಕರಿಸಿದಂತೆ. ಇದು ಚುನಾವಣೆಯ ಕಾನೂನು ಮತ್ತು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಆದ್ದರಿಂದ ಕಾಂಗ್ರೆಸ್​ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

Advertisement

ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಮನವಿ : ಕರ್ನಾಟಕ ವಿಧಾನಸಭಾ ಚುನಾವಣೆ 2023ಗೆ ಅಭ್ಯರ್ಥಿಗಳಿಗೆ ಟಿಕೆಟ್​ ಕೊಡಲು ಪ್ರತಿ ಆಕಾಂಕ್ಷಿಯಿಂದ ಹಣವನ್ನು ಸಂಗ್ರಹಿಸಿದ್ದೇವೆ ಎಂದು ಡಿಕೆ ಶಿವಕುಮಾರ್ ವಿವರಿಸಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಹಕ್ಕನ್ನು ಚಲಾಯಿಸಲು, ಹಣ ತೆಗೆದುಕೊಂಡದರೆ ಅದು ಲಂಚ ತೆಗೆದುಕೊಂಡಂತಾಗುತ್ತದೆ. ಇದನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಮನವಿ ಮಾಡಲಾಗಿದೆ.

ಇನ್ನು, ಟಿಕೆಟ್​ ಆಕಾಂಕ್ಷಿಗಳು ಹಣ ನೀಡಿರುವುದರಿಂದ ಅಭ್ಯರ್ಥಿ ಸಹ ಹಣ ಪಾವತಿ ಮಾಡಿರುತ್ತಾರೆ ಎಂಬುವುದು ಸ್ಪಷ್ಟವಾಗಿದೆ. ಲಂಚ ನೀಡಿದ ಅಭ್ಯರ್ಥಿಗಳು ಮುಂಬರುವ ಚುನಾವಣಾ ಪ್ರಕ್ರಿಯೆಯಿಂದ ಅನರ್ಹರಾಗುತ್ತಾರೆ. ಹಣವನ್ನು ತೆಗೆದುಕೊಂಡು ಬಿ ಫಾರ್ಮ್ ನೀಡುವುದು ಸಹ ಕಾನೂನು ಬಾಹಿರವಾಗಿದೆ. ಸದ್ಯ ಕಾಂಗ್ರೆಸ್ ಪಕ್ಷ, ಡಿ.ಕೆ ಶಿವಕುಮಾರ್ ತಮ್ಮ ಅಭ್ಯರ್ಥಿಗಳಿಗೆ ನೀಡಿದ ಎಲ್ಲಾ ಬಿ ಫಾರ್ಮ್‍ಗಳು ಅಕ್ರಮವಾಗಿದೆ. ಅವುಗಳನ್ನು ತಿರಸ್ಕರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಟಿಕೆಟ್​ ಆಕಾಂಕ್ಷಿಗಳಿಂದ ಸುಮಾರು 23 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಸುಮಾರು 1,350 ಟಿಕೆಟ್ ಆಕಾಂಕ್ಷಿಗಳು ಕಾಂಗ್ರೆಸ್ ಪಕ್ಷದ ಟಿಕೆಟ್​ ಪಡೆದುಕೊಳ್ಳಲು ಹಣ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಸಾರ ಆಗಿದೆ. ಲಂಚ ಪಡೆದು ಕಾಂಗ್ರೆಸ್ ಟಿಕೆಟ್ ನೀಡಿರುವುದು ಮಾಧ್ಯಮಗಳ ವರದಿಗಳಲ್ಲಿ ಸ್ಪಷ್ಟವಾಗಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಮನವಿ: ಚುನಾವಣಾ ಪ್ರಕ್ರಿಯೆಯಲ್ಲಿ ಡಿ.ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷ ಚುನಾವಣಾ ಹಕ್ಕನ್ನು ಮುಕ್ತವಾಗಿ ಚಲಾಯಿಸಲು ಬಿಡದೆ ಮಧ್ಯ ಪ್ರವೇಶ ಮಾಡಿದೆ. ಹಣ ಪಡೆದು ಆಕಾಂಕ್ಷಿಗಳಿಗೆ ಬಿ ಪಾರಂ ನೀಡುವುದು ಕಾನೂನುಬಾಹಿರ. ಇದು ಚುನಾವಣಾ ಪ್ರಕ್ರಿಯೆಗೆ ಕಳಂಕವಾಗಿದೆ. ಆದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಕೋರಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಬೇಕಾಗಿದೆ. ಕಾಂಗ್ರೆಸ್ ಅಧ್ಯಕ್ಷರು ಮತ್ತು ಟಿಕೆಟ್‍ಗಾಗಿ ಲಂಚ ನೀಡಿದ ಎಲ್ಲಾ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣೆಗಳು ಮತ್ತು ಅಕ್ರಮ ಎಸಗುವ ಮೂಲಕ ನೀಡಲಾದ ಬಿ ಫಾರ್ಮ್‍ಗಳನ್ನು ತಿರಸ್ಕರಿಸಬೇಕು. ನ್ಯಾಯ ಮತ್ತು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲು ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

6 hours ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

6 hours ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

18 hours ago

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

19 hours ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

1 day ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago