Advertisement
ಸುದ್ದಿಗಳು

ಕಾಂಗ್ರೆಸ್ ವಿರುದ್ಧ ಹಣ ಪಡೆದು ಟಿಕೆಟ್ ಕೊಟ್ಟ ಆರೋಪ ಮಾಡಿದ ಬಿಜೆಪಿ | ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

Share

 ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಶೇಷಾದ್ರಿ ರಸ್ತೆ ಬಳಿ ಇರುವ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ದೂರು ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ಬಿ ಫಾರಂ ನೀಡುವ ಅಧಿಕೃತ ವ್ಯಕ್ತಿಯಾಗಿದ್ದಾರೆ. ಆದರೆ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಹಣ ಸಂಗ್ರಹಿಸಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಲಂಚ ಸ್ವೀಕರಿಸಿದಂತೆ. ಇದು ಚುನಾವಣೆಯ ಕಾನೂನು ಮತ್ತು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಆದ್ದರಿಂದ ಕಾಂಗ್ರೆಸ್​ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಮನವಿ : ಕರ್ನಾಟಕ ವಿಧಾನಸಭಾ ಚುನಾವಣೆ 2023ಗೆ ಅಭ್ಯರ್ಥಿಗಳಿಗೆ ಟಿಕೆಟ್​ ಕೊಡಲು ಪ್ರತಿ ಆಕಾಂಕ್ಷಿಯಿಂದ ಹಣವನ್ನು ಸಂಗ್ರಹಿಸಿದ್ದೇವೆ ಎಂದು ಡಿಕೆ ಶಿವಕುಮಾರ್ ವಿವರಿಸಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಹಕ್ಕನ್ನು ಚಲಾಯಿಸಲು, ಹಣ ತೆಗೆದುಕೊಂಡದರೆ ಅದು ಲಂಚ ತೆಗೆದುಕೊಂಡಂತಾಗುತ್ತದೆ. ಇದನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಮನವಿ ಮಾಡಲಾಗಿದೆ.

ಇನ್ನು, ಟಿಕೆಟ್​ ಆಕಾಂಕ್ಷಿಗಳು ಹಣ ನೀಡಿರುವುದರಿಂದ ಅಭ್ಯರ್ಥಿ ಸಹ ಹಣ ಪಾವತಿ ಮಾಡಿರುತ್ತಾರೆ ಎಂಬುವುದು ಸ್ಪಷ್ಟವಾಗಿದೆ. ಲಂಚ ನೀಡಿದ ಅಭ್ಯರ್ಥಿಗಳು ಮುಂಬರುವ ಚುನಾವಣಾ ಪ್ರಕ್ರಿಯೆಯಿಂದ ಅನರ್ಹರಾಗುತ್ತಾರೆ. ಹಣವನ್ನು ತೆಗೆದುಕೊಂಡು ಬಿ ಫಾರ್ಮ್ ನೀಡುವುದು ಸಹ ಕಾನೂನು ಬಾಹಿರವಾಗಿದೆ. ಸದ್ಯ ಕಾಂಗ್ರೆಸ್ ಪಕ್ಷ, ಡಿ.ಕೆ ಶಿವಕುಮಾರ್ ತಮ್ಮ ಅಭ್ಯರ್ಥಿಗಳಿಗೆ ನೀಡಿದ ಎಲ್ಲಾ ಬಿ ಫಾರ್ಮ್‍ಗಳು ಅಕ್ರಮವಾಗಿದೆ. ಅವುಗಳನ್ನು ತಿರಸ್ಕರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಟಿಕೆಟ್​ ಆಕಾಂಕ್ಷಿಗಳಿಂದ ಸುಮಾರು 23 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಸುಮಾರು 1,350 ಟಿಕೆಟ್ ಆಕಾಂಕ್ಷಿಗಳು ಕಾಂಗ್ರೆಸ್ ಪಕ್ಷದ ಟಿಕೆಟ್​ ಪಡೆದುಕೊಳ್ಳಲು ಹಣ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಸಾರ ಆಗಿದೆ. ಲಂಚ ಪಡೆದು ಕಾಂಗ್ರೆಸ್ ಟಿಕೆಟ್ ನೀಡಿರುವುದು ಮಾಧ್ಯಮಗಳ ವರದಿಗಳಲ್ಲಿ ಸ್ಪಷ್ಟವಾಗಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಮನವಿ: ಚುನಾವಣಾ ಪ್ರಕ್ರಿಯೆಯಲ್ಲಿ ಡಿ.ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷ ಚುನಾವಣಾ ಹಕ್ಕನ್ನು ಮುಕ್ತವಾಗಿ ಚಲಾಯಿಸಲು ಬಿಡದೆ ಮಧ್ಯ ಪ್ರವೇಶ ಮಾಡಿದೆ. ಹಣ ಪಡೆದು ಆಕಾಂಕ್ಷಿಗಳಿಗೆ ಬಿ ಪಾರಂ ನೀಡುವುದು ಕಾನೂನುಬಾಹಿರ. ಇದು ಚುನಾವಣಾ ಪ್ರಕ್ರಿಯೆಗೆ ಕಳಂಕವಾಗಿದೆ. ಆದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಕೋರಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಬೇಕಾಗಿದೆ. ಕಾಂಗ್ರೆಸ್ ಅಧ್ಯಕ್ಷರು ಮತ್ತು ಟಿಕೆಟ್‍ಗಾಗಿ ಲಂಚ ನೀಡಿದ ಎಲ್ಲಾ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣೆಗಳು ಮತ್ತು ಅಕ್ರಮ ಎಸಗುವ ಮೂಲಕ ನೀಡಲಾದ ಬಿ ಫಾರ್ಮ್‍ಗಳನ್ನು ತಿರಸ್ಕರಿಸಬೇಕು. ನ್ಯಾಯ ಮತ್ತು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲು ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

7 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

10 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

16 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

22 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

22 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago