ಹೆಸರು ಬದಲಾಯಿಸುತ್ತಾರಾ ಶೋಭಾ ಕರಂದ್ಲಾಜೆ…? | ಶುರುವಾಗಿದೆ ಚರ್ಚೆ |

September 29, 2022
3:04 PM

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.

ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror