ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.
ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…