ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.
ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…