ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.
ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…