ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.
ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.