ಸುದ್ದಿಗಳು

ಹೆಸರು ಬದಲಾಯಿಸುತ್ತಾರಾ ಶೋಭಾ ಕರಂದ್ಲಾಜೆ…? | ಶುರುವಾಗಿದೆ ಚರ್ಚೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.

Advertisement
Advertisement

ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

11 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

12 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

19 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

19 hours ago