ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.
ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…