ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.
ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…