ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.
ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…