Advertisement
MIRROR FOCUS

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

Share

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ ಭಾರತ. ಆದರೆ ಭಾರತದಲ್ಲಿ ಹಿಂದೂಗಳೇ ಹೆಚ್ಚಿರುವ ದೇಶವಾಗಿದೆ. ಆದರೆ ಈಗ ಹಿಂದುಗಳ ಸಂಖ್ಯೆಯಲ್ಲಿ ಇಳಿಮುಖ ಕಂಡು ಬಂದಿದೆ. ಭಾರತದಲ್ಲಿ (India) ಬಹುಸಂಖ್ಯಾತ ಹಿಂದೂಗಳು (Hindu) ಸಂಖ್ಯೆ ಬಹಳ ಕುಸಿತವಾಗಿದೆ ಎಂದು ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿಯೊಂದು (Economic Advisory Council to the Prime Minister) ವರದಿ ಪ್ರಕಟಿಸಿದೆ.

Advertisement
ಶಮಿಕಾ ರವಿ, ಅಪೂರ್ವ್ ಕುಮಾರ್ ಮಿಶ್ರಾ, ಅಬ್ರಹಾಂ ಜೋಸ್ ಅವರಿದ್ದ ತಂಡ 1950 ಮತ್ತು 2015ರ ನಡುವೆ 167 ದೇಶಗಳಲ್ಲಿರುವ ಧರ್ಮಗಳನ್ನು (Religion) ಅಧ್ಯಯನ ಮಾಡಿ ವರದಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣಾ (Lok Sabha Election) ಸಮಯದಲ್ಲಿ ಈ ವರದಿ ಬಿಡುಗಡೆ ಮಾಡಿದ್ದು ರಾಜಕೀಯ ಪಕ್ಷಗಳ ಮಧ್ಯೆ ಮತ್ತೊಂದು ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆಯಿದೆ.

ವರದಿಯಲ್ಲಿ ಏನಿದೆ? 1950 ಮತ್ತು 2015 ರ ನಡುವೆ ಭಾರತದಲ್ಲಿ ಹಿಂದೂಗಳ ಪ್ರಮಾಣ 7.8% ರಷ್ಟು ಕುಸಿತವಾದರೆ ಮುಸ್ಲಿಮರ (Muslims) ಪ್ರಮಾಣ 53% ಏರಿಕೆಯಾಗಿದೆ. 1950ರಲ್ಲಿ 84.68% ಹಿಂದೂಗಳಿದ್ದರೆ ಈಗ ಇದು 78.06% ಇಳಿಕೆಯಾಗಿದೆ. ಮುಸ್ಲಿಮ್‌ ಜನಸಂಖ್ಯೆ 9.84% ಇದ್ದರೆ ಈಗ ಇದು 14.09% ಏರಿಕೆಯಾಗಿದೆ. ಭಾರತದಲ್ಲಿ ಹಿಂದೂ ಜನಸಂಖ್ಯೆಯು ಕುಗ್ಗಿದರೆ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ ಮತ್ತು ಸಿಖ್‌ ಜನಾಂಗವರ ಸಂಖ್ಯೆ ಹೆಚ್ಚಳವಾದರೆ ಜೈನ ಮತ್ತು ಪಾರ್ಸಿಗಳ ಸಂಖ್ಯೆ ಕಡಿಮೆಯಾಗಿದೆ.

ಕೈಸ್ತರು 5.38%, ಸಿಖ್‌ 6.58%, ಬೌದ್ಧ 0.81% ಪ್ರಮಾಣದಲ್ಲಿ ಏರಿಕೆಯಾಗಿದೆ. 1950 ರಲ್ಲಿ ಕ್ರೈಸ್ತರ ಸಂಖ್ಯೆ 2.24 ಇದ್ದರೆ 2015ರಲ್ಲಿ 2.36% ಏರಿದೆ. 1950 ರಲ್ಲಿ ಸಿಖ್ಬರ ಸಂಖ್ಯೆ 1.24% ಇದ್ದರೆ 2015ರಲ್ಲಿ 1.85% ಏರಿಕೆಯಾಗಿದೆ. 1950 ರಲ್ಲಿ ಬೌದ್ಧರ ಸಂಖ್ಯೆ 0.05% ಇದ್ದರೆ 0.81% ಏರಿಕೆಯಾಗಿದೆ. ಜೈನರ ಸಂಖ್ಯೆ 1950ರಲ್ಲಿ 0.45% ಇದ್ದರೆ 2015ರಲ್ಲಿ 0.36% ಇಳಿದಿದೆ. ಪಾರ್ಸಿ ಜನಾಂಗದ ಸಂಖ್ಯೆ 85% ಇಳಿಕೆಯಾಗಿದ್ದು 0.03% ನಿಂದ ಇದು 0.004% ಇಳಿದಿದೆ.  ಪಾಕಿಸ್ತಾನದಲ್ಲಿ 3.75%, ಬಾಂಗ್ಲಾದೇಶ 18.55% ಬಹುಸಂಖ್ಯಾತ ಮುಸ್ಲಿಮರ ಸಂಖ್ಯೆ ಹೆಚ್ಚಳವಾಗಿದೆ. ಫ್ರಾನ್ಸ್‌ನಲ್ಲಿ 36.76%, ಯುಕೆ 25.29% ಅಮೆರಿಕದಲ್ಲಿ 45.80% ಕ್ರೈಸ್ತರ ಸಂಖ್ಯೆ ಇಳಿಕೆಯಾಗಿದೆ.

ಅಲ್ಪಸಂಖ್ಯಾತರ ಏರಿಕೆಗೆ ಕಾರಣ ಏನು? : ಅಲ್ಪಸಂಖ್ಯಾತರ (Minority) ಜೀವನವನ್ನು ಸುಧಾರಿಸಲು ಭಾರತದ ಸರ್ಕಾರ ನೀತಿಗಳು, ರಾಜಕೀಯ ನಿರ್ಧಾರಗಳು, ಭಾರತದಲ್ಲಿ ವೈವಿಧ್ಯತೆ ವಾತಾವರಣದಿಂದಾಗಿ ಭಾರತದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಏರಿಕೆಯಾಗಿದೆ.

ಸುದ್ದಿಮೂಲ : ಅಂತರ್ಜಾಲ  

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

11 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

11 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

11 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

11 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

11 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

11 hours ago