Advertisement
MIRROR FOCUS

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

Share

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ ಭಾರತ. ಆದರೆ ಭಾರತದಲ್ಲಿ ಹಿಂದೂಗಳೇ ಹೆಚ್ಚಿರುವ ದೇಶವಾಗಿದೆ. ಆದರೆ ಈಗ ಹಿಂದುಗಳ ಸಂಖ್ಯೆಯಲ್ಲಿ ಇಳಿಮುಖ ಕಂಡು ಬಂದಿದೆ. ಭಾರತದಲ್ಲಿ (India) ಬಹುಸಂಖ್ಯಾತ ಹಿಂದೂಗಳು (Hindu) ಸಂಖ್ಯೆ ಬಹಳ ಕುಸಿತವಾಗಿದೆ ಎಂದು ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿಯೊಂದು (Economic Advisory Council to the Prime Minister) ವರದಿ ಪ್ರಕಟಿಸಿದೆ.

ಶಮಿಕಾ ರವಿ, ಅಪೂರ್ವ್ ಕುಮಾರ್ ಮಿಶ್ರಾ, ಅಬ್ರಹಾಂ ಜೋಸ್ ಅವರಿದ್ದ ತಂಡ 1950 ಮತ್ತು 2015ರ ನಡುವೆ 167 ದೇಶಗಳಲ್ಲಿರುವ ಧರ್ಮಗಳನ್ನು (Religion) ಅಧ್ಯಯನ ಮಾಡಿ ವರದಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣಾ (Lok Sabha Election) ಸಮಯದಲ್ಲಿ ಈ ವರದಿ ಬಿಡುಗಡೆ ಮಾಡಿದ್ದು ರಾಜಕೀಯ ಪಕ್ಷಗಳ ಮಧ್ಯೆ ಮತ್ತೊಂದು ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆಯಿದೆ.

ವರದಿಯಲ್ಲಿ ಏನಿದೆ? 1950 ಮತ್ತು 2015 ರ ನಡುವೆ ಭಾರತದಲ್ಲಿ ಹಿಂದೂಗಳ ಪ್ರಮಾಣ 7.8% ರಷ್ಟು ಕುಸಿತವಾದರೆ ಮುಸ್ಲಿಮರ (Muslims) ಪ್ರಮಾಣ 53% ಏರಿಕೆಯಾಗಿದೆ. 1950ರಲ್ಲಿ 84.68% ಹಿಂದೂಗಳಿದ್ದರೆ ಈಗ ಇದು 78.06% ಇಳಿಕೆಯಾಗಿದೆ. ಮುಸ್ಲಿಮ್‌ ಜನಸಂಖ್ಯೆ 9.84% ಇದ್ದರೆ ಈಗ ಇದು 14.09% ಏರಿಕೆಯಾಗಿದೆ. ಭಾರತದಲ್ಲಿ ಹಿಂದೂ ಜನಸಂಖ್ಯೆಯು ಕುಗ್ಗಿದರೆ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ ಮತ್ತು ಸಿಖ್‌ ಜನಾಂಗವರ ಸಂಖ್ಯೆ ಹೆಚ್ಚಳವಾದರೆ ಜೈನ ಮತ್ತು ಪಾರ್ಸಿಗಳ ಸಂಖ್ಯೆ ಕಡಿಮೆಯಾಗಿದೆ.

ಕೈಸ್ತರು 5.38%, ಸಿಖ್‌ 6.58%, ಬೌದ್ಧ 0.81% ಪ್ರಮಾಣದಲ್ಲಿ ಏರಿಕೆಯಾಗಿದೆ. 1950 ರಲ್ಲಿ ಕ್ರೈಸ್ತರ ಸಂಖ್ಯೆ 2.24 ಇದ್ದರೆ 2015ರಲ್ಲಿ 2.36% ಏರಿದೆ. 1950 ರಲ್ಲಿ ಸಿಖ್ಬರ ಸಂಖ್ಯೆ 1.24% ಇದ್ದರೆ 2015ರಲ್ಲಿ 1.85% ಏರಿಕೆಯಾಗಿದೆ. 1950 ರಲ್ಲಿ ಬೌದ್ಧರ ಸಂಖ್ಯೆ 0.05% ಇದ್ದರೆ 0.81% ಏರಿಕೆಯಾಗಿದೆ. ಜೈನರ ಸಂಖ್ಯೆ 1950ರಲ್ಲಿ 0.45% ಇದ್ದರೆ 2015ರಲ್ಲಿ 0.36% ಇಳಿದಿದೆ. ಪಾರ್ಸಿ ಜನಾಂಗದ ಸಂಖ್ಯೆ 85% ಇಳಿಕೆಯಾಗಿದ್ದು 0.03% ನಿಂದ ಇದು 0.004% ಇಳಿದಿದೆ.  ಪಾಕಿಸ್ತಾನದಲ್ಲಿ 3.75%, ಬಾಂಗ್ಲಾದೇಶ 18.55% ಬಹುಸಂಖ್ಯಾತ ಮುಸ್ಲಿಮರ ಸಂಖ್ಯೆ ಹೆಚ್ಚಳವಾಗಿದೆ. ಫ್ರಾನ್ಸ್‌ನಲ್ಲಿ 36.76%, ಯುಕೆ 25.29% ಅಮೆರಿಕದಲ್ಲಿ 45.80% ಕ್ರೈಸ್ತರ ಸಂಖ್ಯೆ ಇಳಿಕೆಯಾಗಿದೆ.

ಅಲ್ಪಸಂಖ್ಯಾತರ ಏರಿಕೆಗೆ ಕಾರಣ ಏನು? : ಅಲ್ಪಸಂಖ್ಯಾತರ (Minority) ಜೀವನವನ್ನು ಸುಧಾರಿಸಲು ಭಾರತದ ಸರ್ಕಾರ ನೀತಿಗಳು, ರಾಜಕೀಯ ನಿರ್ಧಾರಗಳು, ಭಾರತದಲ್ಲಿ ವೈವಿಧ್ಯತೆ ವಾತಾವರಣದಿಂದಾಗಿ ಭಾರತದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಏರಿಕೆಯಾಗಿದೆ.

ಸುದ್ದಿಮೂಲ : ಅಂತರ್ಜಾಲ  

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

20 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago