ಮುಂದಿನ 25 ವರ್ಷದಲ್ಲಿ ಕಾವೇರಿಯಲ್ಲಿ ನೀರಿನ ತೀವ್ರ ಕೊರತೆ | ನೀತಿ ಆಯೋಗ ಎಚ್ಚರ

July 11, 2024
10:48 AM

ಮುಂಗಾರು ಮಳೆ(Monsoon Rain) ಅಧಿಕವಾಗಿ ಸುರಿಯುತ್ತಿದೆ. ಮಳೆ(Rain) ಚೆನ್ನಾಗಿ ಆಗುತ್ತಿದೆ. ಹಳ್ಳ-ಕೊಳ್ಳಗಳು, ಅಣೆಕಟ್ಟುಗಳು(Dam) ಭರ್ತಿಯಾಗುತ್ತಿವೆ ಎಂಬ ವರದಿಗಳನ್ನು ಕೇಳಿ ನಮ್ಮಲ್ಲೇ ನಾವು ನಿಟ್ಟಿಸಿರು ಬಿಡುತ್ತಿದ್ದೇವೆ. ಆದರೆ ವಾಸ್ತವವೇ ಬೇರೆ ಇದೆ. ಇಷ್ಟೆಲ್ಲಾ ಖುಷಿ ಸುದ್ದಿಯನ್ನು ಓದಿದ ರೈತರಿಗೆ(Farmers), ಜನತೆಗೆ ಒಂದು ಶಾಕಿಂಗ್‌ ಸುದ್ದಿ ಇದೆ. ಮುಂಗಾರು ಮಳೆ ಹೊತ್ತಲ್ಲಿ ಆತಂಕ ಮೂಡಿಸುವ ಸುದ್ದಿಯನ್ನು ನೀತಿ ಆಯೋಗ (Niti Aayoga) ನೀಡಿದೆ. ಮುಂದಿನ 25 ವರ್ಷದಲ್ಲಿ ಕಾವೇರಿಯ ಪ್ರದೇಶದಲ್ಲಿ (Basin of The Cauvery River) ನೀರಿನ ತೀವ್ರ ಕೊರತೆಯಾಗಲಿದೆ(Water scarcity) ಎಂದು ಎಚ್ಚರಿಕೆ ನೀಡಿದೆ.

ಕರ್ನಾಟಕ (Karnataka) ಮತ್ತು ತಮಿಳುನಾಡು (Tamilnadu) ರಾಜ್ಯಗಳು ಕಡಿಮೆ ನೀರಿನಲ್ಲಿ ಬೆಳೆ ಬೆಳೆಯುವ ಪದ್ದತಿಯನ್ನು ಅಳವಡಿಸಿಕೊಳ್ಳುವ ಬದಲು ಹೆಚ್ಚು ನೀರನ್ನು ಉಪಯೋಗಿಸುವ ಯೋಜನೆಗಳಿಗೆ ಕೈ ಹಾಕುತ್ತಿವೆ. ಇದರಿಂದ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಬಿಕ್ಕಟ್ಟು ಹೆಚ್ಚಾಗುವ ಸಂಭವವಿದೆ. ಹೀಗಾಗಿ ಅಂತರ್ಜಲ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಹೇಳಿದೆ. ಪ್ರಸಕ್ತ ಮುಂಗಾರಿನ ಮೊದಲ 40 ದಿನದಲ್ಲಿ ಚಿಕ್ಕಮಗಳೂರಿನಲ್ಲಿ 28%ರಷ್ಟು, ಕೊಡಗಿನಲ್ಲಿ 21%ರಷ್ಟು, ಶಿವಮೊಗ್ಗದಲ್ಲಿ 20%ರಷ್ಟು ಮಳೆ ಕೊರತೆಯಾಗಿದೆ. ಕೊಡಗಿನಲ್ಲಿ ಮಳೆ ಕಡಿಮೆಯಾದ ಕಾರಣ ಕಾವೇರಿಕೊಳ್ಳದ ಜಲಾಶಯಗಳ ಒಳಹರಿವು ಕೂಡ ಕಡಿಮೆಯಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
April 13, 2026
11:30 PM
by: ಮಿರರ್‌ ಡೆಸ್ಕ್
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ
April 13, 2026
10:45 PM
by: ಮಿರರ್‌ ಡೆಸ್ಕ್
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ
April 13, 2026
10:28 PM
by: ಮಿರರ್‌ ಡೆಸ್ಕ್
ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ
April 13, 2026
10:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror