Advertisement
MIRROR FOCUS

ಮುಂದಿನ 25 ವರ್ಷದಲ್ಲಿ ಕಾವೇರಿಯಲ್ಲಿ ನೀರಿನ ತೀವ್ರ ಕೊರತೆ | ನೀತಿ ಆಯೋಗ ಎಚ್ಚರ

Share

ಮುಂಗಾರು ಮಳೆ(Monsoon Rain) ಅಧಿಕವಾಗಿ ಸುರಿಯುತ್ತಿದೆ. ಮಳೆ(Rain) ಚೆನ್ನಾಗಿ ಆಗುತ್ತಿದೆ. ಹಳ್ಳ-ಕೊಳ್ಳಗಳು, ಅಣೆಕಟ್ಟುಗಳು(Dam) ಭರ್ತಿಯಾಗುತ್ತಿವೆ ಎಂಬ ವರದಿಗಳನ್ನು ಕೇಳಿ ನಮ್ಮಲ್ಲೇ ನಾವು ನಿಟ್ಟಿಸಿರು ಬಿಡುತ್ತಿದ್ದೇವೆ. ಆದರೆ ವಾಸ್ತವವೇ ಬೇರೆ ಇದೆ. ಇಷ್ಟೆಲ್ಲಾ ಖುಷಿ ಸುದ್ದಿಯನ್ನು ಓದಿದ ರೈತರಿಗೆ(Farmers), ಜನತೆಗೆ ಒಂದು ಶಾಕಿಂಗ್‌ ಸುದ್ದಿ ಇದೆ. ಮುಂಗಾರು ಮಳೆ ಹೊತ್ತಲ್ಲಿ ಆತಂಕ ಮೂಡಿಸುವ ಸುದ್ದಿಯನ್ನು ನೀತಿ ಆಯೋಗ (Niti Aayoga) ನೀಡಿದೆ. ಮುಂದಿನ 25 ವರ್ಷದಲ್ಲಿ ಕಾವೇರಿಯ ಪ್ರದೇಶದಲ್ಲಿ (Basin of The Cauvery River) ನೀರಿನ ತೀವ್ರ ಕೊರತೆಯಾಗಲಿದೆ(Water scarcity) ಎಂದು ಎಚ್ಚರಿಕೆ ನೀಡಿದೆ.

ಕರ್ನಾಟಕ (Karnataka) ಮತ್ತು ತಮಿಳುನಾಡು (Tamilnadu) ರಾಜ್ಯಗಳು ಕಡಿಮೆ ನೀರಿನಲ್ಲಿ ಬೆಳೆ ಬೆಳೆಯುವ ಪದ್ದತಿಯನ್ನು ಅಳವಡಿಸಿಕೊಳ್ಳುವ ಬದಲು ಹೆಚ್ಚು ನೀರನ್ನು ಉಪಯೋಗಿಸುವ ಯೋಜನೆಗಳಿಗೆ ಕೈ ಹಾಕುತ್ತಿವೆ. ಇದರಿಂದ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಬಿಕ್ಕಟ್ಟು ಹೆಚ್ಚಾಗುವ ಸಂಭವವಿದೆ. ಹೀಗಾಗಿ ಅಂತರ್ಜಲ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಹೇಳಿದೆ. ಪ್ರಸಕ್ತ ಮುಂಗಾರಿನ ಮೊದಲ 40 ದಿನದಲ್ಲಿ ಚಿಕ್ಕಮಗಳೂರಿನಲ್ಲಿ 28%ರಷ್ಟು, ಕೊಡಗಿನಲ್ಲಿ 21%ರಷ್ಟು, ಶಿವಮೊಗ್ಗದಲ್ಲಿ 20%ರಷ್ಟು ಮಳೆ ಕೊರತೆಯಾಗಿದೆ. ಕೊಡಗಿನಲ್ಲಿ ಮಳೆ ಕಡಿಮೆಯಾದ ಕಾರಣ ಕಾವೇರಿಕೊಳ್ಳದ ಜಲಾಶಯಗಳ ಒಳಹರಿವು ಕೂಡ ಕಡಿಮೆಯಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

3 minutes ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

9 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

10 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

14 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

14 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 day ago