ಬೆಂಗಳೂರು ನಗರ , ಕುಡಿಯುವ ನೀರಿನ ಕೊರತೆಯಂತಹ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದರು.
Advertisement
ನಗರದ ಜನಸಂಖ್ಯೆ ಸುಮಾರು 1.45 ಕೋಟಿ ಮೀರಿದ್ದು, ಎಲ್ಲ ನಿವಾಸಿಗಳಿಗೆ ಕುಡಿಯುವ ನೀರು ಒದಗಿಸುವುದು ದುಸ್ತರವಾಗಿದೆ. ಈ ಮಧ್ಯೆ ಖಾಸಗಿ ಟ್ಯಾಂಕರ್ ಗಳು , ಪ್ರತಿ ಟ್ಯಾಂಕ್ ನೀರಿಗೆ 1 ಸಾವಿರದ 200 ರೂಪಾಯಿಯಿಂದ 3 ಸಾವಿರದ ವರೆಗೆ ಶುಲ್ಕ ಪಡೆಯುತ್ತಿದ್ದು, ಸಾಮಾನ್ಯ ಜನರಿಗೆ ದುಬಾರಿಯಾಗಿ ಪರಿಣಮಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದರು. ಹಿಂದೆ ಕೆರೆಗಳ ನಗರವಾಗಿದ್ದ ಬೆಂಗಳೂರು, ಒತ್ತುವರಿ ಕಾರಣದಿಂದಾಗಿ ನೀರಿನ ಮೂಲಗಳನ್ನು ಕಳೆದುಕೊಂಡಿದ್ದು, ಅಂತರ್ಜಲ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗೆ ರಾಜಕೀಯ ಹೊರತುಪಡಿಸಿ, ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಕೋರಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement