ಬೆಂಗಳೂರಿನಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ | ರಾಜ್ಯಸಭೆಯಲ್ಲಿ ನೀರಿನ ಸಮಸ್ಯೆ ಬಗ್ಗೆ ಮಾತನಾಡಿದ ದೇವೇ ಗೌಡ | ಮೇಕೆದಾಟು ಯೋಜನೆಗೆ ಪಕ್ಷಾತೀತವಾಗಿ ಯೋಜನೆ ಬೆಂಬಲಿಸಲು ದೇವೇಗೌಡ ಮನವಿ

December 5, 2024
7:15 AM

ಬೆಂಗಳೂರು ನಗರ , ಕುಡಿಯುವ ನೀರಿನ ಕೊರತೆಯಂತಹ  ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದರು.

ನಗರದ ಜನಸಂಖ್ಯೆ ಸುಮಾರು 1.45 ಕೋಟಿ ಮೀರಿದ್ದು, ಎಲ್ಲ ನಿವಾಸಿಗಳಿಗೆ ಕುಡಿಯುವ ನೀರು ಒದಗಿಸುವುದು ದುಸ್ತರವಾಗಿದೆ.  ಈ ಮಧ್ಯೆ ಖಾಸಗಿ ಟ್ಯಾಂಕರ್ ಗಳು , ಪ್ರತಿ ಟ್ಯಾಂಕ್ ನೀರಿಗೆ 1 ಸಾವಿರದ 200 ರೂಪಾಯಿಯಿಂದ 3 ಸಾವಿರದ ವರೆಗೆ ಶುಲ್ಕ ಪಡೆಯುತ್ತಿದ್ದು, ಸಾಮಾನ್ಯ ಜನರಿಗೆ ದುಬಾರಿಯಾಗಿ ಪರಿಣಮಿಸಿದೆ.  ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದರು. ಹಿಂದೆ ಕೆರೆಗಳ ನಗರವಾಗಿದ್ದ ಬೆಂಗಳೂರು, ಒತ್ತುವರಿ ಕಾರಣದಿಂದಾಗಿ ನೀರಿನ ಮೂಲಗಳನ್ನು ಕಳೆದುಕೊಂಡಿದ್ದು, ಅಂತರ್ಜಲ ಕುಸಿದಿದೆ.  ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗೆ ರಾಜಕೀಯ ಹೊರತುಪಡಿಸಿ, ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಕೋರಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror