ಬೆಂಗಳೂರು ನಗರ , ಕುಡಿಯುವ ನೀರಿನ ಕೊರತೆಯಂತಹ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದರು.
ನಗರದ ಜನಸಂಖ್ಯೆ ಸುಮಾರು 1.45 ಕೋಟಿ ಮೀರಿದ್ದು, ಎಲ್ಲ ನಿವಾಸಿಗಳಿಗೆ ಕುಡಿಯುವ ನೀರು ಒದಗಿಸುವುದು ದುಸ್ತರವಾಗಿದೆ. ಈ ಮಧ್ಯೆ ಖಾಸಗಿ ಟ್ಯಾಂಕರ್ ಗಳು , ಪ್ರತಿ ಟ್ಯಾಂಕ್ ನೀರಿಗೆ 1 ಸಾವಿರದ 200 ರೂಪಾಯಿಯಿಂದ 3 ಸಾವಿರದ ವರೆಗೆ ಶುಲ್ಕ ಪಡೆಯುತ್ತಿದ್ದು, ಸಾಮಾನ್ಯ ಜನರಿಗೆ ದುಬಾರಿಯಾಗಿ ಪರಿಣಮಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದರು. ಹಿಂದೆ ಕೆರೆಗಳ ನಗರವಾಗಿದ್ದ ಬೆಂಗಳೂರು, ಒತ್ತುವರಿ ಕಾರಣದಿಂದಾಗಿ ನೀರಿನ ಮೂಲಗಳನ್ನು ಕಳೆದುಕೊಂಡಿದ್ದು, ಅಂತರ್ಜಲ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗೆ ರಾಜಕೀಯ ಹೊರತುಪಡಿಸಿ, ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಕೋರಿದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…