ಬೆಂಗಳೂರು ನಗರ , ಕುಡಿಯುವ ನೀರಿನ ಕೊರತೆಯಂತಹ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದರು.
ನಗರದ ಜನಸಂಖ್ಯೆ ಸುಮಾರು 1.45 ಕೋಟಿ ಮೀರಿದ್ದು, ಎಲ್ಲ ನಿವಾಸಿಗಳಿಗೆ ಕುಡಿಯುವ ನೀರು ಒದಗಿಸುವುದು ದುಸ್ತರವಾಗಿದೆ. ಈ ಮಧ್ಯೆ ಖಾಸಗಿ ಟ್ಯಾಂಕರ್ ಗಳು , ಪ್ರತಿ ಟ್ಯಾಂಕ್ ನೀರಿಗೆ 1 ಸಾವಿರದ 200 ರೂಪಾಯಿಯಿಂದ 3 ಸಾವಿರದ ವರೆಗೆ ಶುಲ್ಕ ಪಡೆಯುತ್ತಿದ್ದು, ಸಾಮಾನ್ಯ ಜನರಿಗೆ ದುಬಾರಿಯಾಗಿ ಪರಿಣಮಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದರು. ಹಿಂದೆ ಕೆರೆಗಳ ನಗರವಾಗಿದ್ದ ಬೆಂಗಳೂರು, ಒತ್ತುವರಿ ಕಾರಣದಿಂದಾಗಿ ನೀರಿನ ಮೂಲಗಳನ್ನು ಕಳೆದುಕೊಂಡಿದ್ದು, ಅಂತರ್ಜಲ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗೆ ರಾಜಕೀಯ ಹೊರತುಪಡಿಸಿ, ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಕೋರಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…