ಬೆಂಗಳೂರು ನಗರ , ಕುಡಿಯುವ ನೀರಿನ ಕೊರತೆಯಂತಹ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದರು.
ನಗರದ ಜನಸಂಖ್ಯೆ ಸುಮಾರು 1.45 ಕೋಟಿ ಮೀರಿದ್ದು, ಎಲ್ಲ ನಿವಾಸಿಗಳಿಗೆ ಕುಡಿಯುವ ನೀರು ಒದಗಿಸುವುದು ದುಸ್ತರವಾಗಿದೆ. ಈ ಮಧ್ಯೆ ಖಾಸಗಿ ಟ್ಯಾಂಕರ್ ಗಳು , ಪ್ರತಿ ಟ್ಯಾಂಕ್ ನೀರಿಗೆ 1 ಸಾವಿರದ 200 ರೂಪಾಯಿಯಿಂದ 3 ಸಾವಿರದ ವರೆಗೆ ಶುಲ್ಕ ಪಡೆಯುತ್ತಿದ್ದು, ಸಾಮಾನ್ಯ ಜನರಿಗೆ ದುಬಾರಿಯಾಗಿ ಪರಿಣಮಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದರು. ಹಿಂದೆ ಕೆರೆಗಳ ನಗರವಾಗಿದ್ದ ಬೆಂಗಳೂರು, ಒತ್ತುವರಿ ಕಾರಣದಿಂದಾಗಿ ನೀರಿನ ಮೂಲಗಳನ್ನು ಕಳೆದುಕೊಂಡಿದ್ದು, ಅಂತರ್ಜಲ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗೆ ರಾಜಕೀಯ ಹೊರತುಪಡಿಸಿ, ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಕೋರಿದರು.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…